Blog

  • ಸೂರ್ಯಮಿತ್ರ ತರಬೇತಿಗೆ ಅರ್ಜಿ ಆಹ್ವಾನ: ಕೂಡಲೇ ಅರ್ಜಿ ಸಲ್ಲಿಸಿ

    ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಯಿಂದ ಸೂರ್ಯ ಮಿತ್ರ ತರಬೇತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ‌. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು.

    ಐಟಿಐ /ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ತರಬೇತಿಯ ಅವಧಿ 3 ತಿಂಗಳುಗಳಾಗಿದ್ದು, ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಇರುತ್ತದೆ.

    ಅರ್ಜಿ ಸಲ್ಲಿಸಲು ಕೊನೆ ದಿನಾಂಕ 08.02.2021

    ತರಬೇತಿಯು 10.02.2021 ರಂದು ಪ್ರಾರಂಭವಾಗಲಿದೆ.

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕನ್ನು ಕ್ಲಿಕ್ಕಿಸಿ

    http://www.mgired.kar.nic.in

    ದೂರವಾಣಿ ಸಂಖ್ಯೆ : 23626359/23626493/9611757523

  • ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

    ಕರ್ನಾಟಕ ಲೋಕಸೇವಾ ಆಯೋಗವು 2017-18 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದೆ.

    ಗೆಜೆಟೆಡ್ ಪ್ರೊಬೆಷನರಿಗೆ ನಡೆಸಲಾಗುವ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

    ಅರ್ಹತಾ ಪತ್ರಿಕೆಗಳಾದ ಕನ್ನಡ, ಇಂಗ್ಲೀಷ್ ಕ್ರಮವಾಗಿ ದಿನಾಂಕ 13-02-2021 ರಂದು ಬೆಳಗ್ಗೆ ಸಮಯ 10 ರಿಂದ 12 ಗಂಟೆಯವರೆಗೆ ಹಾಗೇ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಡೆಯಲಿದೆ. ಫೆಬ್ರವರಿ 14 ರಂದು ಬೆಳಿಗ್ಗೆ 9 ರಿಂದ 12 ಗಂಟೆವರೆಗೆ ಪತ್ರಿಕೆ-1 (ಪ್ರಬಂಧ) ನಡೆಯಲಿದೆ.
    ಉಳಿದ ಮಾಹಿತಿಗಾಗಿ ಈ ಕೆಳಗಿನ ಪಟ್ಟಿಯಲ್ಲಿ ಮಾಹಿತಿಯನ್ನು ಪಡೆಯಬಹುದು.

  • KSRP ಪರಿಷ್ಕೃತ ಆಯ್ಕೆ ಪಟ್ಟಿ ಪ್ರಕಟ

    ದಿನಾಂಕ 29-08-2019 ರಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್ ಸಬ್ ಇನ್ಸ್ ಪೆಕ್ಟರ್ (KSRP) ಪುರುಷ ಹಾಗೂ ಸೇವಾ ನಿರತ ಹುದ್ದೆಗಳ ನೇಮಕಾತಿಯ ಅಧಿಸೂಚನೆಯನ್ನು ಹೊರಡಿಸಿ, ನೇಮಕಾತಿ ಪ್ರಕ್ರಿಯೆಯನ್ನು ವಿವಿಧ ಹಂತಗಳಲ್ಲಿ ಕೈಗೊಂಡಿತ್ತು.

    ಈಗ ಹುದ್ದೆಗಳ ತಾತ್ಕಾಲಿಕ ಪರಿಷ್ಕೃತ ಆಯ್ಕೆ ಪಟ್ಟಿಯನ್ನು ಇಲಾಖೆಯು ತನ್ನ ಅಧಿಕೃತ ಜಾಲತಾಣದಲ್ಲಿ ಪ್ರಕಟಿಸಿದೆ.

    ಒಟ್ಟು 5 ಅಭ್ಯರ್ಥಿಗಳು ಬೇರೆ ಹುದ್ದೆಗೆ ಆಯ್ಕೆಯಾಗಿದ್ದಾರೆ.ಈ 5 ಅಭ್ಯರ್ಥಿಗಳು ವಿಶೇಷ ರಿಸರ್ವ್ ಸಬ್ ಇನ್ಸ್ ಪೆಕ್ಟರ್ ಹುದ್ದೆಯನ್ನು ನಿರಾಕರಿಸಿದ್ದರಿಂದ, 5 ಹೊಸದಾಗಿ ಅಭ್ಯರ್ಥಿಗಳನ್ನು ಇಲಾಖೆಯು ಆಯ್ಕೆ ಮಾಡಿದ್ದು ಅಭ್ಯರ್ಥಿಗಳ ವಿವರಗಳನ್ನು ಕೆಳಗೆ ನೀಡಿರುವ ಲಿಂಕ್ ಮೂಲಕ ನೋಡಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಭಾರತೀಯ ಪಶುಪಾಲನ ನಿಗಮ ನಿಯಮಿತದಲ್ಲಿ (BPNL)ಖಾಲಿ ಹುದ್ದೆಗೆ ಅರ್ಜಿ ಆಹ್ವಾನ : ಈ ಕೂಡಲೇ ಅರ್ಜಿ ಸಲ್ಲಿಸಿ

    ಭಾರತೀಯ ಪಶುಪಾಲನ ನಿಗಮ ನಿಯಮಿತದಲ್ಲಿ (BPNL) ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ‌.

    ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ.

    ಹುದ್ದೆಗಳ ವಿವರ ಈ ಕೆಳಗಿನಂತಿದೆ:
    ಮಾರಾಟ ವ್ಯವಸ್ಥಾಪಕ(sales manage) ಮಾರಾಟ ಅಭಿವೃದ್ಧಿ ಅಧಿಕಾರಿ( salea development officer)ಮಾರಾಟ ಸಹಾಯಕ ಹುದ್ದೆ ( sales assistant)ಗಳಿಗೆ ಅರ್ಜಿ ಆಹ್ವಾನಿಸಿದೆ.

    ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15, 2021 ಕೊನೆಯ ದಿನವಾಗಿರುತ್ತದೆ.

    ಹುದ್ದೆಯ ಸಂಖ್ಯೆ: 3216

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಫೆಬ್ರವರಿ, 2021

    ಹುದ್ದೆಗಳ ಸಂಖ್ಯೆ
    ಮಾರಾಟ ವ್ಯವಸ್ಥಾಪಕ-64
    ಮಾರಾಟ ಅಭಿವೃದ್ಧಿ ಅಧಿಕಾರಿ-485
    ಮಾರಾಟ ಸಹಾಯಕ ಹುದ್ದೆ-2667

    ವಿದ್ಯಾರ್ಹತೆ
    ಮಾರಾಟ ವ್ಯವಸ್ಥಾಪಕ(sales manager) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಚುಲರ್ ಡಿಗ್ರಿ ಹೊಂದಿರಬೇಕು.

    ಮಾರಾಟ ಅಭಿವೃದ್ಧಿ ಅಧಿಕಾರಿ(sales development officer) ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಪಿಯುಸಿ ಪಾಸಾಗಿರಬೇಕು.

    ಮಾರಾಟ ಸಹಾಯಕ ( sales assistant) ಹುದ್ದೆಗೆ ಆಸಕ್ತರಿರುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸಾಗಿರಬೇಕು.

    ವಯೋಮಿತಿ

    ಮಾರಾಟ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 25 ಮತ್ತು ಗರಿಷ್ಠ 45 ವರ್ಷ ವಯಸ್ಸಾಗಿರಬೇಕು.

    ಮಾರಾಟ ಅಭಿವೃದ್ಧಿ ಅಧಿಕಾರಿ ಹಾಗೂ ಮಾರಾಟ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತರಿರುವ ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 40 ವಯಸ್ಸಾಗಿರಬೇಕು.

    ಅರ್ಜಿ ಶುಲ್ಕ ಇರುವುದಿಲ್ಲ.(null)

    BPNL website link

    ಆನ್ಲೈನ್ ಅರ್ಜಿ ಸಲ್ಲಿಸಲು ಲಿಂಕ್

  • ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ‌.

    ಹುದ್ದೆಯ ವಿವರ ಈ ಕೆಳಗಿನಂತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆ

    1. ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು- 02
      2.ಜಿಲ್ಲಾ ಯೋಜನಾ ವ್ಯವಸ್ಥಾಪಕರು-01
    2. ಜಿಲ್ಲಾ MIS ಸಮಾಲೋಚಕರು-05
    3. ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು(IEC)-04
      5.ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು

    ಈ ಮೇಲಿನ ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಒಂದು ವರ್ಷದ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಮೇರೆಗೆ ನೇಮಿಸಿಕೊಳ್ಳಲಾಗುವುದು.

    ವಯೋಮಿತಿ

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಆಗಿರಬೇಕು.

    ದೂರ ಶಿಕ್ಷಣದ ಮುಖಾಂತರ ಸ್ನಾತಕೋತ್ತರ ಪದವಿ ಪಡೆದಿದ್ದರೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

    ಆಯ್ಕೆಯಾದ ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಕರಾರು ಒಪ್ಪಂದವನ್ನು ಮಾಡಿಕೊಳ್ಳಬೇಕು.

    ಅನುಭವದ ಆಧಾರದ ಮೇಲೆ ಮಾಸಿಕ ಸಮಾಲೋಚನಾ ಶುಲ್ಕ ನಿಗದಿಪಡಿಸಲಾಗುವುದು.

    ಆಯ್ಕೆಯಾದ ಅಭ್ಯರ್ಥಿಗೆ ಇಲಾಖೆಯಲ್ಲಿನ ಯಾವುದೇ ಹುದ್ದೆಗಳಲ್ಲಿ ವಿಲೀನಗೊಳ್ಳಲು/ಮುಂದುವರೆಯಲು ಯಾವುದೇ ಹಕ್ಕು ಇರುವುದಿಲ್ಲ

    ಅರ್ಜಿ ನಮೂನೆಯಲ್ಲಿ ಮಾಹಿತಿ ಯನ್ನು ತುಂಬಿ, ವಿದ್ಯಾರ್ಹತೆ, ಅನುಭವ ಪ್ರಮುಖ ಸಾಮರ್ಥ್ಯ ಗಳು, ವಯಸ್ಸಿನ ದೃಢೀಕರಣ, resume ಹಾಗೂ ಅರ್ಜಿ ಜೊತೆಗೆ ” ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ” ಎಂಬುದರ ಬಗ್ಗಯ ಟಿಪ್ಪಣಿ ಬರೆದು ಅರ್ಜಿಯ ಹಾರ್ಡ್ ಪ್ರತಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

    ಆಯುಕ್ತರು,
    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ,
    2ನೇ ಮಹಡಿ,
    ಕೆ.ಹೆಚ್.ಬಿ. ಕಟ್ಟಡ,
    ಕಾವೇರಿ ಭವನ,
    ಕೆ.ಜಿ.ರಸ್ತೆ, ಬೆಂಗಳೂರು-5600009

    ಅಭ್ಯರ್ಥಿಗಳು ದಿನಾಂಕ 20.02.2021 , ಸಂಜೆ 5.30 ರ ಒಳಗೆ ಅರ್ಜಿಗಳನ್ನು ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

    ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು, ನಿಗದಿಪಡಿಸಿದ ದಿನಾಂಕ ಮತ್ತು ಸಮಯದಲ್ಲಿ ಹಾಜರಾಗಿರುವುದು ಹಾಗೂ ಆಯ್ಕೆಯಾದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ನಿಗದಿಸಿದ ದಿನಾಂಕದಂದು ಅಭ್ಯರ್ಥಿಗಳು ಹಾಜರಿರತಕ್ಕದ್ದು.

    ಅರ್ಜಿ ನಮೂನೆಯು RDPR website : https://rdpr.Karnataka.gov.in ಮತ್ತು https://swachhamevajayate.org(ನೇಮಕಾತಿ ಲಿಂಕ್) ನಲ್ಲಿ ಲಭ್ಯವಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

  • ಬಿಇಸಿಐಎಲ್ನಲ್ಲಿ ಉದ್ಯೋಗವಕಾಶ, ಫೆಬ್ರವರಿ ತಿಂಗಳಿನ ೧೩ ರ ಮೊದಲು ಅರ್ಜಿ ಸಲ್ಲಿಸಿ

    BECIL (ಬ್ರಾಡ್ ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟಿಂಗ್ ಇಂಡಿಯಾ ಲಿಮಿಟೆಡ್) ಕನ್ಸಲ್ಟಿಂಗ್ ಭಾಷಾ ಸಂಪಾದಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಿದೆ.
    ಆಸಕ್ತರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆಯ ಹೆಸರು – ಸಲಹಾ ಭಾಷಾ ಸಂಪಾದಕರಾಗಿ (ಕನ್ಸಲ್ಟಿಂಗ್ ಲಾಂಗ್ವೇಜ್‌ ಎಡಿಟರ್)

    ಹುದ್ದೆಯ ಸಂಖ್ಯೆ-6.
    ತಮಿಳು (1)
    ಕನ್ನಡ(1)
    ಮರಾಠಿ (1)
    ಪಂಜಾಬಿ(1)
    ಬೆಂಗಾಲಿ (1)
    ಒಡಿಯಾ(1)
    ಭಾರತದ ಕಚೇರಿಗಳಲ್ಲಿ ನಿಯೋಜಿಸಲು ಒಪ್ಪಂದದ ಆಧಾರದ ಮೇಲೆ ಅರ್ಜಿಗಳನ್ನು ಆಹ್ವಾನಿಸಿದೆ.

    ಆನ್‌ ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಫೆಬ್ರವರಿ 12, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ.

    ವಿದ್ಯಾರ್ಹತೆ

    ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ/ಡಿಪ್ಲೊಮಾ/ಸ್ನಾತಕೋತ್ತರ ಪದವಿ ಹೊಂದಿರಬೇಕು.

    ವಯೋಮಿತಿ

    BECIL ನೇಮಕಾತಿ ಮಾನದಂಡಗಳ ಪ್ರಕಾರ ಅನ್ವಯವಾಗುತ್ತದೆ.

    ಅರ್ಜಿ ಶುಲ್ಕ

    ಅರ್ಜಿ ಶುಲ್ಕ ಆನ್ ಲೈನ್ ಮುಖಾಂತರ ಪಾವತಿಸಬೇಕು.
    ಜನರಲ್/ಒಬಿಸಿ/ಎಕ್ಸ್ ಸರ್ವಿಸ್ ಮ್ಯಾನ್/ ಮಹಿಳಾ ಅಭ್ಯರ್ಥಿಗಳು ರೂ‌.750 ನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಇಡ್ಬ್ಯು ಎಸ್/ಪಿಎಚ್ ಅಭ್ಯರ್ಥಿಗಳು ರೂ‌.450 ನ್ನು ಪಾವತಿಸಬೇಕು.

    ಇತರೆ ಅರ್ಹತೆಗಳು

    ಟಿ.ವಿ ಅಥವಾ ಪ್ರಿಂಟ್ ಪಬ್ಲಿಕೇಶನ್ ಅಥವಾ ರೇಡಿಯೋನಲ್ಲಿ 5 ವರ್ಷಗಳ ಅನುಭವ. ಎಡಿಟಿಂಗ್, ಫ್ರೂಫ್ ರೀಡಿಂಗ್, ಟ್ರಾನ್ಸ್ ಲೇಶನ್ ಮಾಡಲು ತಿಳಿದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸುವುದು ಹೇಗೆ?
    ಎಲ್ಲಾ ಅರ್ಹ ಅಭ್ಯರ್ಥಿಗಳು ಫೆಬ್ರವರಿ -2021 ಬ್ರಾಡ್ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಕನ್ಸಲ್ಟೆಂಟ್ ಲಾಂಗ್ವೇಜ್ ಎಡಿಟರ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು
    ಹಂತ -1: ಮೊದಲನೆಯದಾಗಿ BECIL ನೇಮಕಾತಿ ಅಧಿಸೂಚನೆ 2021 ಮೂಲಕ ಸಂಪೂರ್ಣವಾಗಿ ಹೋಗಿ ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಇದೆಯೇ ಎಂದು ಖಚಿತಪಡಿಸಿಕೊಳ್ಳಿ
    ಹಂತ -2: ಆನ್‌ಲೈನ್ ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವ ಇದ್ದರೆ ದಾಖಲೆಗಳನ್ನು ಸಿದ್ಧವಾಗಿಡಿ. .
    ಹಂತ -3: BECIL ಕನ್ಸಲ್ಟೆಂಟ್ ಭಾಷಾ ಸಂಪಾದಕರು ಆನ್‌ಲೈನ್‌- ಲಿಂಕ್ ಅನ್ನು ಕ್ಲಿಕ್ ಮಾಡಿ. ಲಿಂಕನ್ನು ಕೆಳಗೆ ನೀಡಲಾಗಿದೆ.
    ಹಂತ -4: ಅಗತ್ಯವಿರುವ ಎಲ್ಲ ವಿವರಗಳನ್ನು BECIL ಆನ್‌ಲೈನ್ ಅರ್ಜಿ ನಮೂನೆಯಲ್ಲಿ ನವೀಕರಿಸಿ. ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ (ಅನ್ವಯವಾಗಿದ್ದರೆ) ಅಗತ್ಯ ಪ್ರಮಾಣಪತ್ರಗಳು / ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ

    BECIL ನ website link