Blog

  • KOF : ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

    ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಜನರಲ್ ಮ್ಯಾನೇಜರ್ – 01 ಹುದ್ದೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 32 ಹಾಗೂ ಗರಿಷ್ಠ 50 ವರ್ಷ ಮೀರಿರಬಾರದು.

    ವೇತನ : ರೂ.1,04,600/- ರಿಂದ ರೂ.1,50,800/- ಅನ್ವಯಿಸುವ ಭತ್ಯೆಗಳು.

    ವಿದ್ಯಾರ್ಹತೆ ಮತ್ತು ಅನುಭವ : ಅಂಗೀಕೃತ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಎಂ.ಎಸ್ಸಿ, ಕೃಷಿ ( ಕೃಷಿ ಮಾರಾಟ /ಬೀಜ ತಂತ್ರಜ್ಞಾನ / ಅಗ್ರೋನಮಿ/ ಅಗ್ರಿಕಲ್ಚರ್ ಎಕ್ಸ್ ಟೆನ್ಷನ್ವ/ ಅಗ್ರಿಕಲ್ಚರಲ್ ಎಕಾನಮಿಕ್ಸ್/ ಸಾಯಿಲದ ಸೈನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ
    ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ / ಇನ್ಸ್ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ಮೆಂಟ್, ಆನಂದ್, ಗುಜರಾತ್/ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಅಡ್ಮಿನಿಸ್ಟ್ರೇಶನ್ / ಫೈನಾನ್ಸ್ / ಮಾರ್ಕೆಟಿಂಗ್/ಬ್ಯುಸಿನೆಸ್ ಮ್ಯಾನೇಜ್ಮೆಂಟ್ / ಕೃಷಿ ವಿಷಯದಲ್ಲಿ ಎಂ.ಬಿ.ಎ ಸ್ನಾತಕೋತ್ತರ ಪದವಿ.

    ಕಂಪ್ಯೂಟರ್ ಪೂರ್ಣ ಪರಿಜ್ಞಾನ ಹೊಂದಿರತಕ್ಕದ್ದು.

    ಅನುಭವ : ಪ್ರತಿಷ್ಟಿತ ಸಂಸ್ಥೆಗಳಲ್ಲಿ ಹಿರಿಯ ಹುದ್ದೆಗಳಲ್ಲಿ ಅಂದರೆ – ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ / ಡೆಪ್ಯುಟಿ ಜನರಲ್ ಮ್ಯಾನೇಜರ್ / ಜನರಲ್ ಮ್ಯಾನೇಜರ್ ಅಥವಾ ಈ ಹುದ್ದೆಗಳ ಸಮಾನಂತರ ಹುದ್ದೆಗಳಲ್ಲಿ ಕನಿಷ್ಠ 5 ವರ್ಷಗಳ ಕೆಲಸಸ ಅನುಭವ ಹೊಂದಿರತಕ್ಕದ್ದು.

    ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆ, ಕೆಲಸದ ಅನುಭವ, ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನದಲ್ಲಿ ಗಳಿಸಿದ ಅಂಕಗಳನ್ನು ಪರಿಗಣಿಸಿ, ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

    ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಇವರಿಗೆ ರೂ.500/- ಮತ್ತು ಸಾಮಾನ್ಯ ವರ್ಗದವರಿಗೆ ರೂ.1000/- ಅರ್ಜಿ ಶುಲ್ಕವನ್ನು ಕೆ.ಸಿ.ಓ.ಜಿ.ಎಫ್.ಲಿ., ಬೆಂಗಳೂರು ಇವರ ಹೆಸರಿಗೆ ಬೆಂಗಳೂರಿನಲ್ಲಿ ಪಾವತಿಯಾಗುವಂತೆ ಯಾವುದಾದರೂ ರಾಷ್ಟ್ರೀಕೃತ ಬ್ಯಾಂಕಿನ ಡಿ.ಡಿ.ಯ ಮೂಲಕ‌‌ ಸಲ್ಲಿಸುವುದು.

    ಸಾಮಾನ್ಯ ನಿಬಂಧನೆಗಳು : ಕನ್ನಡ ಭಾಷಾ ಜ್ಞಾನ ಹೊಂದಿದವರಿಗೆ ಆದ್ಯತೆ ನೀಡಲಾಗುವುದು. ವಿದ್ಯಾರ್ಹತೆ, ಅನುಭವ, ವಯಸ್ಸು, ಹಾಗೂ ಮೀಸಲಾತಿಗೆ ಸಂಬಂಧಿಸಿದಂತೆ ‌ಪ್ರತಿಗಳನ್ನು ಲಗತ್ತಿಸತಕ್ಕದ್ದು. ಮುಕ್ತ ವಿಶ್ವವಿದ್ಯಾನಿಲಯದಿಂದ ( Distance education correspondence course) ಪಡೆದ ಪದವಿ, ಸ್ನಾತಕೋತ್ತರ ‌ಪದವಿಗಳನ್ನು ಪರಿಗಣಿಸಲಾಗುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಯನ್ನು ಕರ್ನಾಟಕ ರಾಜ್ಯ ಅಥವಾ ರಾಜ್ಯದ ಹೊರಗು ನೇಮಕಾತಿ ಮತ್ತು ವರ್ಗಾವಣೆ ಮಾಡಲು ಅವಕಾಶವಿರುತ್ತದೆ. ಸೇವೆಯಲ್ಲಿರತಕ್ಕ ಅಭ್ಯರ್ಥಿಗಳು, ಸಂಬಂಧಪಟ್ಟ ಇಲಾಖೆಯ ಮೂಲಕ ಅವಕಾಶವಿರುತ್ತದೆ. ಸೇವೆಯಲ್ಲಿರತಕ್ಕ ಅಭ್ಯರ್ಥಿಗಳು, ಸಂಬಂಧಪಟ್ಟ ಇಲಾಖೆಯ‌ ಮೂಲಕ ಅರ್ಜಿಗಳನ್ನು ಸಲ್ಲಿಸತಕ್ಕದ್ದು. ಸ್ವ ವಿವರ ಹಾಗೂ ಭಾವಚಿತ್ರದೊಂದಿಗೆ ಎಲ್ಲಾ ದಾಖಲಾತಿಗಳನ್ನು‌ ಒಳಗೊಂಡ ಅರ್ಜಿಯನ್ನು ವ್ಯವಸ್ಥಾಪಕ ನಿರ್ದೇಶಕರು, ಕೆ.ಸಿ.ಓ.ಜಿ.ಎಫ್.ಲಿ. ನಂ.11, 4 ನೇ ಮಹಡಿ, ಬ್ಲ್ಯೂ ಕ್ರಾಸ್ ಛೇಂಬರ್ಸ್, ಇನ್ ಫೆಂಟ್ರಿ ಅಡ್ಡರಸ್ತೆ, ಬೆಂಗಳೂರು – 01 ಈ ವಿಳಾಸಕ್ಕೆ ನೇಮಕಾತಿ ಪ್ರಕಟಿತ ದಿನಾಂಕದಿಂದ 21 ದಿನದೊಳಗೆ ‌ತಲುಪುವಂತಿರಬೇಕು. ಅಪೂರ್ಣ / ಶುಲ್ಕವಿಲ್ಲದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

    ದಕ್ಷಿಣ ಕನ್ನಡ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಇಲಾಖೆಯಡಿ ತೆರವಾಗಿರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಆನ್ಲೈನ್ ಮೂಲಕ‌ ಸಲ್ಲಿಸಿದ ದಾಖಲಾತಿಗಳನ್ನು ಮಾತ್ರ ಪರಿಗಣಿಸಲಾಗುವುದು. ತದನಂತರ ದಾಖಲಾತಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

    ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 09-07-2021 ಬೆಳಿಗ್ಗೆ 10.00 ಗಂಟೆಯಿಂದ
    ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-08-2021 ಸಂಜೆ 5.30 ಗಂಟೆಯವರೆಗೆ

    ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 52 ಹುದ್ದೆಗಳು
    ಅಂಗನವಾಡಿ ಸಹಾಯಕಿ : 21 ಹುದ್ದೆಗಳು

    ವೇತನ : ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ರೂ.10,000/-ರಂತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ ರೂ.5000/- ರಂತೆ ಗೌರವಧನ ನೆಲೆಯಲ್ಲಿ ಭರ್ತಿ ಮಾಡಲಾಗುತ್ತಿದೆ.

    ವಯೋಮಿತಿ : ಅಭ್ಯರ್ಥಿಯ ವಯಸ್ಸು 18-35 ವರ್ಷದೊಳಗಿನವರಾಗಿರಬೇಕು. ( ಕಾರ್ಯಕರ್ತೆಯರ ಹುದ್ದೆಗಳಿಗೆ ಮಾತ್ರ ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ಅಂದರೆ ಗರಿಷ್ಠ 45 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ)

    ಅರ್ಹ ಮಹಿಳಾ ಅಭ್ಯರ್ಥಿಗಳು ವೆಬ್‌ಸೈಟ್‌ ಗೆ ಭೇಟಿ ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

  • ಭೂಮಾಪಕರ ಹುದ್ದೆಗೆ ಅರ್ಜಿ ಆಹ್ವಾನ

    ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ಭೂಮಿಯ ಭೂಮಾಪನಾ, ಕಂದಾಯ, ಭೂದಾಖಲೆ ಹಾಗೂ ಭೂ ಸಂಬಂಧಿತ ನ್ಯಾಯಾಲಯದಲ್ಲಿರುವ ದಾವೆಗಳ ಬಗ್ಗೆ ಕರ್ತವ್ಯ ನಿರ್ವಹಿಸಲು ಪ್ರಥಮ ದರ್ಜೆ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ರಾಜ್ಯ ಸರಕಾರ, ಸ್ಥಳೀಯ ಪ್ರಾಧಿಕಾರದಿಂದ ನಿವೃತ್ತಿ ಹೊಂದಿರುವ ಅರ್ಹ, ನುರಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

    ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಸೇವಾನುಭವ ಇತ್ಯಾದಿ ಅಂಶಗಳಿರುವ ಅರ್ಜಿಯನ್ನು ಜು.15 ರೊಳಗೆ ಕುಲಸಚಿವರು, ಬೆಂಗಳೂರು ವಿವಿ, ಜ್ಞಾನಭಾರತಿ ಆವರಣ, ಬೆಂಗಳೂರು – 56 ಈ ವಿಳಾಸಕ್ಕೆ ಸಲ್ಲಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ನಿರ್ಮಿತಿ ಕೇಂದ್ರ, ಚಾಮರಾಜನಗರ ಯೋಜನಾ ವ್ಯವಸ್ಥಾಪಕರ ಹುದ್ದೆ ನೇಮಕಾತಿ ರದ್ದು

    ನಿರ್ಮಿತಿ ಕೇಂದ್ರ, ಚಾಮರಾಜನಗರ ಇವರಿಂದ ದಿನಾಂಕ 31-03-2021 ರಂದು ಹೊರಡಿಸಲಾಗಿದ್ದ ಯೋಜನಾ ವ್ಯವಸ್ಥಾಪಕರ ಹುದ್ದೆ ನೇಮಕಾತಿ ಪ್ರಕಟಣೆಯನ್ನು ಹೊರಡಿಸಲಾಗಿತ್ತು‌.

    ದಿನಾಂಕ 31-03-2021 ನ್ನು ಕಾರಣಾಂತರಗಳಿಂದ ರದ್ದುಪಡಿಸಿದೆ. ಮುಂದಿನ ಸೂಕ್ತ ಸಮಯದಲ್ಲಿ ನೇಮಕಾತಿ ವಿಷಯದಲ್ಲಿ ಪ್ರಕಟಿಣೆ ಹೊರಡಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

  • ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ವಿವಿಧ ಹುದ್ದೆ, ಎಸ್ ಎಸ್ ಎಲ್ ಸಿ ಪಾಸಾದವರಿಗೂ ಆದ್ಯತೆ

    ವಿಶ್ವೇಶ್ವರಯ್ಯ ಜಲ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳಿ ಓದಿ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 22, 2021

    ಹುದ್ದೆಗಳ ವಿವರ : ಅಧಿಕಾರಿ ಹುದ್ದೆಗಳು- 06 ಹುದ್ದೆಗಳು
    ಅಕೌಂಟೆಂಟ್ – 06 ಹುದ್ದೆಗಳು
    ಕಚೇರಿ ಸಹಾಯಕರು – 11 ಹುದ್ದೆಗಳು
    ಆಪ್ತ ಸಹಾಯಕರು – 05 ಹುದ್ದೆಗಳು
    ಡಾಟಾ ಎಂಟ್ರಿ ಅಪರೇಟರ್ – 10 ಹುದ್ದೆಗಳು
    ಟೆಲಿಫೋನ್ ಅಪರೇಟರ್ – 01 ಹುದ್ದೆ
    ವಾಹನ ಚಾಲಕರು – 12 ಹುದ್ದೆಗಳು
    ಅಟೆಂಡರ್ – 12 ಹುದ್ದೆಗಳು
    ಜವಾನರು – 05 ಹುದ್ದೆಗಳು

    ಚಿತ್ರದುರ್ಗ ಹಾಗೂ ಬೆಂಗಳೂರು ಕಚೇರಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಾಗುವುದು.

    ವಿದ್ಯಾರ್ಹತೆ : ಈ ಮೇಲ್ಕಂಡ ಹುದ್ದೆಗಳಿಗೆ‌ ಅನುಸಾರವಾಗಿ ಸಂಬಂಧಿತ ವಿಷಯದಲ್ಲಿ ಎಸ್ ಎಸ್ ಎಲ್ ಸಿ / ಪಿಯುಸಿ/ ಡಿಪ್ಲೋಮಾ ಸೇರಿದಂತೆ ಪದವಿ ಹಾಗೂ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

    ವೇತನ : ರಾಜ್ಯ ಸರಕಾರ್ ವೇತನ ಆಯೋಗದ ಪ್ರಕಾರವಾಗಿ ವೇತನ ನೀಡಲಾಗುವುದು.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ ‌18 ವರ್ಷ ಹಾಗೂ ಗರಿಷ್ಠ 35 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ‌ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ಎಸ್ ಟಿ/ ಪ್ರವರ್ಗ – 1 ಅಭ್ಯರ್ಥಿಗಳಿಗೆ ‌40 ವರ್ಷ.

    ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ನಿಗಮದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಜುಲೈ 22, 2021ರೊಳಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • UAS ಧಾರವಾಡ : ಪಾರ್ಟ್ ಟೈಂ ಟೀಚರ್ ಹುದ್ದೆ ಗೆ ನೇರ ಸಂದರ್ಶನ

    ಕೃಷಿ ಅರ್ಥಶಾಸ್ತ್ರ ವಿಭಾಗ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ 2020-21 ನೇ ಸಾಲಿನ 2 ನೇ‌ ಸೆಮಿಸ್ಟರ್ ನ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಗ್ರಿಕಲ್ಚರ್ ಪ್ರೊಡಕ್ಷನ್ ಎಕಾನಮಿಕ್ಸ್ ವಿಷಯವನ್ನು ಬೋಧಿಸಲು ಈ ಕೆಳ ಕಾಣಿಸಿದ ವಿದ್ಯಾರ್ಹತೆಯನ್ನು ಹೊಂದಿರುವ ” ಅರೆಕಾಲಿಕ ಉಪನ್ಯಾಸಕರು ” ಹುದ್ದೆಗೆ 179 ದಿನಗಳ ಅವಧಿಗೆ ಮೀರದಂತೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಪಾರ್ಟ್ ಟೈಂ ಟೀಚರ್
    ಹುದ್ದೆ ಸಂಖ್ಯೆ : 01
    ವಿದ್ಯಾರ್ಹತೆ : Ph.D ಇನ್ ಅಗ್ರಿಕಲ್ಚರ್ ಎಕಾನಮಿಕ್ಸ್ ಮತ್ತು ಪಿಜಿ ಟೀಚರ್ ಎಕ್ಸ್ ಪೀರಿಯನ್ಸ್ ಹೊಂದಿರಬೇಕು.

    ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ನಮೂನೆಯ ಎರಡು ಪ್ರತಿಯೊಂದಿಗೆ ದಿನಾಂಕ : 20-07-2021 ರಂದು 11.00 ಗಂಟೆಗೆ.

    ಸಂದರ್ಶನಕ್ಕೆ ಡೀನ್ ( ಕೃಷಿ) ರವರ ಕಚೇರಿ, ಕೃಷಿ ಮಹಾವಿದ್ಯಾಲಯ, ಧಾರವಾಡದಲ್ಲಿ ಹಾಜರಾಗಲು ತಿಳಿಸಲಾಗಿದೆ. ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಎರಡು ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಲು ತಿಳಿಸಲಾಗಿದೆ. ಯಾವುದೇ ಸಂದರ್ಭದಲ್ಲಿ ಅರ್ಜಿಯನ್ನು ಮುಂಗಡವಾಗಿ ಕಳುಹಿಸಬಾರದು.