Blog

  • ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-07-2021

    ಹುದ್ದೆ : ಗ್ರೂಪ್ ಡಿ ದಲಾಯತರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಹತೆ ; ಮಾಜಿ ಸೈನಿಕರಾಗಿರಬೇಕು.10 ನೇ ತರಗತಿ ಪಾಸಾಗಿರಬೇಕು. 18 ರಿಂದ 52 ವರ್ಷಗಳ ಒಳಗೆ ಇರಬೇಕು.

    ಅರ್ಜಿ ನಮೂನೆಯನ್ನು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಚೇರಿಯಿಂದ ಜೂನ್ 15 ರಿಂದ 30 ರೊಳಗೆ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಉಪ‌ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಿನಿವಿಧಾನಸೌಧ, ಕಲಬುರಗಿ ಇಲ್ಲಿಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ 08472225003 ಗೆ ಸಂಪರ್ಕಿಸಬಹುದು.

  • ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗಕ್ಕಾಗಿ ಸಾಲಸೌಲಭ್ಯ ಹಾಗೂ ಸಹಾಯ ಧನ

    ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಕೊರೊನಾ ಸೋಂಕಿನಿಂದ ಮರಣ ಹೊಂದಿರುವ ಪರಿಶಿಷ್ಟ ಜಾತಿಯ ಕುಟುಂಬದ ಅವಲಂಬಿತರಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ ಹಾಗೂ ಸಾಲಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಈ ಸಹಾಯಧನ ಸಾಲಸೌಲಭ್ಯ ಪಡೆಯಲು ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 60 ವರ್ಷ ಹೊಂದಿರಬೇಕು. ಅರ್ಹ ಅಭ್ಯರ್ಥಿಗಳಿಗೆ ಸಹಾಯಧನ ರೂ.1.00 ಲಕ್ಷ, ಎನ್ ಎಸ್ ಎಫ್ ಡಿಸಿ ಅವಧಿ ಸಾಲ ರೂ. 4 ಲಕ್ಷ ಸೇರಿ ಒಟ್ಟು ರೂ.5.00 ಲಕ್ಷಗಳನ್ನು ನೀಡಲಾಗುತ್ತದೆ.

    ಕೋವಿಡ್ ನಿಂದ ಮರಣ ಹೊಂದಿರುವ ಪರಿಶಿಷ್ಟ ಜಾತಿಯ ಕುಟುಂಬದ ಅವಲಂಬಿತರು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ( ಆದಾಯ ಗರಿಷ್ಠ 3.00 ಲಕ್ಷ ಒಳಗಿರಬೇಕು) ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಮರಣ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಕೋವಿಡ್ ನಿಂದ ಮರಣ ಹೊಂದಿದ ದೃಢೀಕರಣ ಪತ್ರ, ಮೂರು ಭಾವಚಿತ್ರ, ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಯೊಂದಿಗೆ ಅರ್ಜಿ ಸಲ್ಲಿಸುವುದು.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021

    ಅರ್ಜಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಹಾವೇರಿ ಜಿಲ್ಲಾ ಕಚೇರಿ ಇಲ್ಲಿ ಸಂಪರ್ಕಿಸಲು ಸೂಚಿಸಲಾಗಿದೆ.

    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08375-249012 ಸಂಪರ್ಕಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಪಶು ವೈದ್ಯಕೀಯ ಇಲಾಖೆಯಲ್ಲಿ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ

    ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ 2020 ನೇ ಸಾಲಿನ ವಿವಿಧ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ಪಶುವೈದ್ಯಕೀಯ ಪರೀಕ್ಷಕರು -32
    ಪಶುವೈದ್ಯಕೀಯ ಸಹಾಯಕರು (ಗ್ರೂಪ್ ಸಿ) – 83

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 16-06-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 16-08-2021
    ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 16-08-2021

    ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.520/-, ಎಸ್ ಸಿ, ಎಸ್ ಟಿ ಪ್ರವರ್ಗ – 1 ರ ಅಭ್ಯರ್ಥಿಗಳಿಗೆ ರೂ.270/-. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅಂಚೆ ಕಚೇರಿಯಲ್ಲಿ ಪಾವತಿಸಬೇಕು.

    ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 38 ವರ್ಷ, ಎಸ್ ಸಿ / ಎಸ್ ಟಿ ಅಭ್ಯರ್ಥಿಗಳಿಗೆ 40 ವರ್ಷ

    ಪ್ರಾಣಿ ಶಾಸ್ತ್ರವನ್ನು ಮುಖ್ಯ ವಿಷಯವಾಗಿ ಹೊಂದಿರುವ ಪದವಿಯ ಅಂಕಗಳ ಮೇಲೆ ಹಾಗೂ ರೋಸ್ಟರ್ ವಿಧಾನವನ್ನು ಅನುಸರಿಸಿ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುವುದು.
    ಪಶುವೈದ್ಯಕೀಯ ಸಹಾಯಕರ ಹುದ್ದೆಗೆ ಕಾನೂನಿನ ಮೂಲಕ ಸ್ಥಾಪಿಸಲಾದ ಕರ್ನಾಟಕ ಪಶುವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಶ್ವವಿದ್ಯಾಲಯ ಅಥವಾ ಪಶು ಆರೋಗ್ಯ ಡಿಪ್ಲೋಮಾ ಪರೀಕ್ಷೆ ಪಾಸ್ ಮಾಡಿರಬೇಕು.

    ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಹಾಗೂ ರೋಸ್ಟರ್ ವಿಧಾನವನ್ನು ಅನುಸರಿಸಿ ಆಯ್ಕೆಪಟ್ಟಿಯನ್ನು ಮಾಡಲಾಗುತ್ತದೆ.

    ಭರ್ತಿ ಮಾಡಿದ ಅರ್ಜಿಯನ್ನು ಆನ್ಲೈನ್ ಮುಖಾಂತರ ಆಗಸ್ಟ್ 16, 2021ರ ಸಂಜೆ 5-30 ರೊಳಗೆ ಸಲ್ಲಿಸಬೇಕು.

    ಅರ್ಜಿ ಶುಲ್ಕವನ್ನು ಕರ್ನಾಟಕ ರಾಜ್ಯದ ಯಾವುದೇ ಅಂಚೆ ಕಚೇರಿಗಳಲ್ಲಿ ಆನ್ಲೈನ್ ಗೇಟ್ ವೇ ಮುಖಾಂತರ ಪಾವತಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಚಿತ ಉದ್ಯೋಗ ಕೌಶಲ್ಯ ತರಬೇತಿ

    ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆಯಲ್ಲಿ ಕೆಲವು ನಿರ್ದಿಷ್ಟ ಕೌಶಲ್ಯ ಹೊಂದಿದ 6 ವಿಭಾಗದ ಹುದ್ದೆಗಳಿಗೆ ಕೇಂದ್ರ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮಂತ್ರಾಲಯದ ಮುಖಾಂತರ ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ (NSDC)ದಿಂದ ಅಲ್ಪಾವಧಿ ಕೌಶಲ ತರಬೇತಿ ನೀಡಿ, ನಂತರ ಉದ್ಯೋಗವನ್ನೂ ನೀಡಲಾಗುತ್ತಿದೆ.

    ಹುದ್ದೆಗಳ ವಿವರ:

    1. ಎಮೆರ್ಜೆನ್ಸಿ ಮೆಡಿಕಲ್ ಟೆಕ್ನೀಷಿಯನ್ (Emergency Medical Technician)
    2. ಮೆಡಿಕಲ್ ಎಕ್ವಿಪ್‍ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್ (Medical Equipment Technology Assistant)
    3. ಜನರಲ್ ಡ್ಯೂಟಿ ಅಸಿಸ್ಟೆಂಟ್ (General Duty Assistant)
    4. ಜನರಲ್ ಡ್ಯೂಟಿ ಅಸಿಸ್ಟೆಂಟ್ ಕ್ರಿಟಿಕಲ್ (General Duty Assistant Critical)
    5. ಹೋಮ್ ಹೆಲ್ತ್ ಏಡ್ (Home Health Aide)
    6. ಫ್ಲೆಬೆಟೋಮಿಸ್ಟ್ (Phlebotomist)

    ಈ ಮೇಲಿನ ತಂತ್ರಜ್ಞ ಹುದ್ದೆಗಳನ್ನು ಬಯಸುವ ಆಸಕ್ತರಲ್ಲಿ ಆಯ್ದ ಅಭ್ಯರ್ಥಿಗಳಿಗೆ ಆರೋಗ್ಯ ಇಲಾಖೆಯ ಅಧೀನದ ಜಿಲ್ಲಾ ತರಬೇತಿ ಸಂಸ್ಥೆ ಮತ್ತು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ 4 ತಿಂಗಳ ಕಾಲ ತರಬೇತಿ ನೀಡಲಾಗುತ್ತದೆ. ಯಶಸ್ವಿಯಾಗಿ ತರಬೇತಿ ಪೂರೈಸಿದ ಅಭ್ಯರ್ಥಿಗಳನ್ನು ಬೇಡಿಕೆಗೆ ತಕ್ಕಂತೆ ಜಿಲ್ಲಾ ಅಥವಾ ತಾಲೂಕು ಆಸ್ಪತ್ರೆಗಳಲ್ಲಿ ಉದ್ಯೋಗಕ್ಕೆ ಆಯ್ಕೆ ಮಾಡಲಾಗುವುದು.

    ವಯೋಮಿತಿ: 18ರಿಂದ 45 ವರ್ಷ

    ಮಾಸಿಕ ವೇತನವನ್ನು ವಿದ್ಯಾರ್ಹತೆ ಮತ್ತು ತರಬೇತಿಯನ್ನು ಆಧರಿಸಿ ನಿಗದಿ ಮಾಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸುವ ಕುರಿತು ಒಪ್ಪಿಗೆ ಪತ್ರ ನೀಡಬೇಕಾಗುತ್ತದೆ. ತರಬೇತಿ ಬಳಿಕ ಉದ್ಯೋಗಕ್ಕಾಗಿ ಜಿಲ್ಲಾಸ್ಪತ್ರೆ ಅಥವಾ ತಾಲೂಕು ಆಸ್ಪತ್ರೆಗಳಲ್ಲಿ ನಿಯೋಜಿಸಲಾಗುತ್ತದೆ.

    ಆಸಕ್ತರು ಈ ಕೆಳಗಿನ ಗೂಗಲ್ ಲಿಂಕ್‌ನಲ್ಲಿ ಅರ್ಜಿ ಸಲ್ಲಿಸಬಹುದು.
    https://forms.gle/7bVf5WffDSZsqAgv8

    ಕೊನೆಯ ದಿನಾಂಕ ಜೂನ್ 15 ಎಂದು ತಿಳಿಸಲಾಗಿದ್ದರೂ, ಅರ್ಜಿ ಸಲ್ಲಿಸಲು ಅವಕಾಶವಿದೆ.

    ಹೆಚ್ಚಿನ ಮಾಹಿತಿಗೆ 9480324002 ಸಂಪರ್ಕಿಸಿ.

  • ವೆನ್ಲಾಕ್ ಆಸ್ಪತ್ರೆ : ಶುಶ್ರೂಷಕರ ಹುದ್ದೆಗೆ ಅರ್ಜಿ ಆಹ್ವಾನ

    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ DCH (Dedicated Covid Hospital) ಆಗಿ ಕಾರ್ಯ ನಿರ್ವಹಿಸುತ್ತಿರುವ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

    ಒಟ್ಟು ಹುದ್ದೆಯ ಸಂಖ್ಯೆ – 08

    ವಿದ್ಯಾರ್ಹತೆ- ನರ್ಸಿಂಗ್ ಕೌನ್ಸಿಲ್‍ನಲ್ಲಿ ನೋಂದಣಿ

    ಜೂನ್ 19ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್‌ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.(ಗುತ್ತಿಗೆ ಆಧಾರದಲ್ಲಿ ಸೆಪ್ಟೆಂಬರ್ 30ರವರೆಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು)

  • ಗ್ರಾಮ ಕಾಯಕ ಮಿತ್ರ ಹುದ್ದೆಗೆ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ 04 ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 04 ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಗೌರವ ಧನದ ಆಧಾರದ ಮೇಲೆ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ದೊಡ್ಡಬಳ್ಳಾಪುರ ತಾಲ್ಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿ ಹಾಗೂ ನೆಲಮಂಗಲ ತಾಲ್ಲೂಕಿನ ಕೋಡಿಗೆಹಳ್ಳಿ, ಯಂಟಗಾನಹಳ್ಳಿ ಮತ್ತು ನರಸೀಪುರ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 17-06-2021 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24-06-2021 ರ ಸಂಜೆ 05.00 ಗಂಟೆಯವರೆಗೆ. ಹೆಚ್ಚಿನ ವಿವರಗಳಿಗಾಗಿ ಗ್ರಾಮ ಪಂಚಾಯತಿ/ ತಾಲ್ಲೂಕು ಪಂಚಾಯಿತಿಗಳನ್ನು ಸಂಪರ್ಕಿಸಬಹುದಾಗಿದೆ.

    ಅರ್ಹತೆಗಳು : ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು.
    ದಿನಾಂಕ 01-01-2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ‌ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ್ ಹೊಂದಿರಬೇಕು.
    ಅಭ್ಯರ್ಥಿಯು ಕಳೆದ ಮೂರು ವರ್ಷಗಳಲ್ಲಿ (2018-19, 2019-20, 2020-21) ಕನಿಷ್ಠ ಎರಡು ವರ್ಚಯ ಯೋಜನೆಯಡಿ ಅಕುಶಲ ಕೂಲಿಕಾರ್ಮಿಕರಾಗಿ ಕೆಲಸ ನಿರ್ವಹಿಸಬೇಕು.
    ದಿನಾಂಕ 01-01-2021 ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು.
    ಓದು ಬರಹ ಚೆನ್ನಾಗಿ ತಿಳಿದಿರಬೇಕು.
    ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.
    ಅಭ್ಯರ್ಥಿಯು ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ರೋಜ್ ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್ ಗಾರ್ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.