Blog

  • BEL ನಲ್ಲಿ ಅಪ್ರೆಂಟಿಸ್ ಶಿಪ್ :  ಐಟಿಐ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    BEL ನಲ್ಲಿ ಅಪ್ರೆಂಟಿಸ್ ಶಿಪ್ : ಐಟಿಐ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

    ಭಾರತೀಯ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಮತ್ತು ಭಾರತದ ಪ್ರಥಮ ವೃತ್ತಿಪರ ಎಲೆಕ್ಟ್ರಾನಿಕ್ಸ್ ಸಾರ್ವಜನಿಕ ವಲಯದ ನವರತ್ನ ಕಂಪನಿ ಆಗಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಬೆಂಗಳೂರು, ಕಾರ್ಖಾನೆಯಲ್ಲಿ ಶಿಶಿಕ್ಷು ಕಾಯಿದೆ 1961 ರ ಅಡಿಯಲ್ಲಿ 2021-22 ನೇ ಸಾಲಿನ ಅವಧಿಗೆ ಅಪ್ರೆಂಟಿಶಿಪ್ ತರಬೇತುದಾರರನ್ನು ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021

    ಹುದ್ದೆಗಳ ವಿವರ : ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಇಲೆಕ್ಟ್ರೀಷಿಯನ್, ಮೆಶಿನಿಸ್ಟ್, ಟರ್ನರ್, ಡ್ರಾಫ್ಟ್ ಮೆನ್ ಮೆಕ್ಯಾನಿಕ್, ಎಲೆಕ್ಟ್ರೋ ಪ್ಲಾಟರ್, ಮೆಕ್ಯಾನಿಕ್ ಶೈತ್ಯೀಕರಣ ಮತ್ತು ಹವಾನಿಯಂತ್ರಣ ( ಎಮ್ ಆರ್ & ಎಸಿ), ಕಂಪ್ಯೂಟರ್ ಅಪರೇಟರ್ ಪ್ರೊಗ್ರಾಮಿಂಗ್ ಅಸಿಸ್ಟೆಂಟ್ ( ಕೋಪಾ), ವೆಲ್ಡರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ 01-01-2018 ರಂದು ಅಥವಾ ನಂತರ ಐಟಿಐ ಪಾಸಾಗಿರಬೇಕು.

    ಅಭ್ಯರ್ಥಿಗಳು ಎನ್ ಸಿವಿಟಿ / ಎಸ್ ಸಿವಿಟಿ ಮಂಡಳಿಗಳು ನೀಡಿದ ಐಟಿಐ ಪ್ರಮಾಣ ಪತ್ರಗಳನ್ನು ಹೊಂದಿರಬೇಕು.

    ವಯಸ್ಸಿನ ಮಿತಿ : 21 ವರ್ಷಗಳು. ಎಸ್ ಸಿ/ ಎಸ್ ಟಿ ವರ್ಗಕ್ಕೆ 5 ವರ್ಷ, ಒಬಿಸಿ ವರ್ಗಕ್ಕೆ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ವಿನಾಯಿತಿ ನೀಡಲಾಗುವುದು. ಮತ್ತು ಕನಿಷ್ಠ 40% ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ನೀಡಲಾಗುವುದು.

    ಬೇರೆ ಯಾವುದೇ ಸಂಸ್ಥೆಯಲ್ಲಿ ಈಗಾಗಲೇ ಅಪ್ರೆಂಟಿಸ್ ಶಿಪ್ ತರಬೇತಿ ಪಡೆಯುತ್ತಿರುವವರು ತರಬೇತಿಗಾಗಿ ನೋಂದಾಯಿಸಿಕೊಂಡ ಅಭ್ಯರ್ಥಿಗಳು ಅರ್ಹರಲ್ಲ.

    ಕರ್ನಾಟಕ ರಾಜ್ಯದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಲು ಅರ್ಹರು.

    ಆಯ್ಕೆ ಪ್ರಕ್ರಿಯೆ : ಎಸ್ ಎಸ್ ಎಲ್ ಸಿ/ 10 ನೇ ತರಗತಿ ಮತ್ತು ಐಟಿಐ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

    ಅಂತಿಮ ಆಯ್ಕೆಯ ಫಲಿತಾಂಶವನ್ನು ಬಿಇಎಲ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಅಥವಾ ಪ್ರಮಾಣ ಪತ್ರಗಳ‌ ಪರಿಶೀಲನೆಯ ದಿನಾಂಕದಂದು ತತಕ್ಷಣ ಆಯ್ಕೆಯ ಪತ್ರವನ್ನು ‌ನೀಡಲಾಗುವುದು. ಅಥವಾ ಎಸ್ ಎಂಎಸ್ / ಇ- ಮೇಲ್ ಮೂಲಕ ತಿಳಿಸಲಾಗುವುದು.

    ಆಸಕ್ತ ಅಭ್ಯರ್ಥಿಗಳು ಕೆಳಗೆ ತಿಳಿಸಲಾದ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಜೊತೆಗೆ 10/ನೇ / ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್, ಐಟಿಐ ಮಾರ್ಕ್ಸ್ ಕಾರ್ಡ್, ಜಾತಿ‌ಪ್ರಮಾಣ ಪತ್ರ( ಅನ್ವಯಿಸಿದ್ದರೆ ) ಮತ್ತು ಆಧಾರ್ ಕಾರ್ಡ್ ಗಳನ್ನು ಲಗತ್ತಿಸಬೇಕು.

    ವಿಳಾಸ : Deputy Manager ( HR/CLD), centre for learning and development, Bharat Electronics Limited, Jalahalli post, Bengaluru-560013

    ಹೆಚ್ಚಿನ ವಿವರಗಳು ಹಾಗೂ ಸ್ಪಷ್ಟೀಕರಣಗಳಿಗಾಗಿ ದಯವಿಟ್ಟು ಸಂಪರ್ಕಿಸಿ , ಇ – ಮೇಲ್: [email protected] ಅಥವಾ 080-22195323

    ಹೆಚ್ಚಿನ ವಿವರಗಳಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • 63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಗಳ ಘೋಷಣೆ : ವಿವರಗಳು ಇಲ್ಲಿದೆ

    63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿವೇತನಗಳ ಘೋಷಣೆ : ವಿವರಗಳು ಇಲ್ಲಿದೆ

    5 ವರ್ಷಗಳ ಅವಧಿಯಲ್ಲಿ ರಾಷ್ಟ್ರೀಯ ಮಾನದಂಡಗಳಿಗೆ ಸಮನಾಗಿ ಎಸ್ ಸಿಗಳಲ್ಲಿ ಒಟ್ಟು ದಾಖಲಾತಿ ಅನುಪಾತವನ್ನು (ಉನ್ನತ ಶಿಕ್ಷಣ) ತರಲು ಭಾರತ ಸರಕಾರವು ರಾಜ್ಯ ಸರಕಾರದೊಂದಿಗೆ ಕೂಡಿ 2021-22 ರ ಅವಧಿಯಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 63 ಲಕ್ಷ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನವನ್ನು ‌ನೀಡಲಿದೆ.

    ಅರ್ಹತೆ : ಎಸ್ ಸಿ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ 11ನೇ ತರಗತಿ ಮತ್ತು ಅದಕ್ಕಿಂತ ಮೇಲಿನ ತರಗತಿಯಲ್ಲಿ ಅಧ್ಯಯನ ಮಾಡಲು ಅವರ ಪೋಷಕರ ವಾರ್ಷಿಕ ಆದಾಯ ರೂ.< 25 ಲಕ್ಷ ಇರಬೇಕು.

    ಉಪಯೋಗಗಳು : ಕೋರ್ಸ್ ನ ಸಂಪೂರ್ಣ ಅವಧಿಗೆ ವಿದ್ಯಾರ್ಥಿವೇತನವು ಈ ಕೆಳಗಿನ ಅಂಶಗಳನ್ನು ಒಳಗೊಂಡಿದೆ.
    ಬೋಧನಾ ಶುಲ್ಕ ಸೇರಿದಂತೆ ಕಡ್ಡಾಯ ಮರುಪಾವತಿಸಬೇಕಾದ ಶುಲ್ಕಗಳು.
    ಶಿಕ್ಷಣದ ಮಟ್ಟವನ್ನು ಆಧರಿಸಿ ವಾರ್ಷಿಕ ‌2500 ರಿಂದ 13500 ರವರೆಗೆ ಶೈಕ್ಷಣಿಕ ಭತ್ಯೆ.
    ದಿವ್ಯಾಂಗ ವಿದ್ಯಾರ್ಥಿಗಳಿಗೆ ಹತ್ತು ಪರ್ಸೆಂಟ್ ಹೆಚ್ಚುವರಿ ಭತ್ಯೆ ನೀಡಲಾಗುವುದು.
    ಎಲ್ಲಾ ಅರ್ಹ ವಿದ್ಯಾರ್ಥಿಗಳು ಬೋಧನಾ ‌ಶುಲ್ಕ‌ಮತ್ತು ಹಾಸ್ಟೆಲ್ ಶುಲ್ಕವನ್ನು ‌ಮೊದಲೇ ಪಾವತಿಸದೆ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.
    ಅರ್ಹ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರಗಳು ಫ್ರೀ ಶಿಪ್ ಕಾರ್ಡ್ ನೀಡುವ ಮೂಲಕ ಶುಲ್ಕವನ್ನು ಮೊದಲೇ ಪಾವತಿಸದೆ ಸಂಸ್ಥೆಯಲ್ಲಿ ಅಧ್ಯಯನ ಮಾಡಲು ಅನುವು ಮಾಡಿಕೊಡುತ್ತವೆ‌

    ಅರ್ಜಿಗಳು : ಎಲ್ಲಾ ಅರ್ಹ ವಿದ್ಯಾರ್ಥಿಗಳು ರಾಜ್ಯ ಸರಕಾರದ ಆನ್ಲೈನ್ ‌ವಿದ್ಯಾರ್ಥಿವೇತನ ವೇದಿಕೆಯಲ್ಲಿ 2021 ರ ಎಪ್ರಿಲ್ 16 ಜೂನ್ 30 ರವರೆಗೆ ಪ್ರಾರಂಭವಾಗುವ ಮೊದಲ ಕರೆಯಲ್ಲಿ ಅರ್ಜಿ ಸಲ್ಲಿಸಬಹುದು.
    ಯಾವುದೇ ತೊಂದರೆಗಳಿದ್ದಲ್ಲಿ ರಾಜ್ಯ ಸರಕಾರದ ಕುಂದುಕೊರತೆ ಪರಿಹಾರ ಸಂಖ್ಯೆಗೆ ಕರೆ ಮಾಡಿ ಅಥವಾ ರಾಜ್ಯ ಸರಕಾರದ ‌ಸಮಾಜ ಕಲ್ಯಾಣ ಆಯುಕ್ತರನ್ನು ಸಂಪರ್ಕಿಸಬಹುದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.socialjustice.nic.in ನಲ್ಲಿ ನೋಡಬಹುದು.

  • ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾ ಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿ ಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಅರ್ಜಿ ಅವಧಿಯನ್ನು ವಿಸ್ತರಿಸಲಾಗಿದೆ.

    ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ / ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ( ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು) ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೂನ್ 20, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಈಗಾಗಲೇ ಎಸ್ ಎಸ್ ಪಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಪ್ರಾರಂಭಗೊಂಡಿದ್ದು, ಅರ್ಜಿಯನ್ನು ಪೂರ್ಣಗೊಳಿಸದೇ ಇರುವ ಅಭ್ಯರ್ಥಿಗಳಿಗೆ ಮಾತ್ರ ಅನ್ವಯಿಸುವಂತೆ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.

    ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ : 8050770005/8050770004

    ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ದಕ್ಷಿಣ ರೈಲ್ವೆ 3378 ಹುದ್ದೆ: ಎಸ್ ಎಸ್ ಎಲ್ ಸಿ, ಐಟಿಐ ಪಾಸಾದವರಿಗೆ ಆದ್ಯತೆ

    ದಕ್ಷಿಣ ರೈಲ್ವೆ 3378 ಹುದ್ದೆ: ಎಸ್ ಎಸ್ ಎಲ್ ಸಿ, ಐಟಿಐ ಪಾಸಾದವರಿಗೆ ಆದ್ಯತೆ

    ದಕ್ಷಿಣ ರೈಲ್ವೆಯ ವಿವಿಧ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಹುದ್ದೆ : ಕ್ಯಾರಿಯೇಜ್ ವರ್ಕ್ಸ್ ಪೆರಂಬೂರು – 936
    ಗೋಲ್ಡನ್ ರಾಕ್ ವರ್ಕ್ಸ್ ಶಾಪ್ – 756
    ಸಿಗ್ನಲ್ ಮತ್ತು ಟೆಲಿಕಾಂ ವರ್ಕ್ ಶಾಪ್ , ಪೊಡನೂರು – 1686

    ಒಟ್ಟು ಹುದ್ದೆ : 3378

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 29-05-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-06-2021

    ವಯೋಮಿತಿ : ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ/ ಐಟಿಐ/ ಡಿಪ್ಲೋಮಾ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ರೂ.100/- ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಜಿಲ್ಲಾ ಪಂಚಾಯತ್ ಬಳ್ಳಾರಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಜಿಲ್ಲಾ ಪಂಚಾಯತ್ ಬಳ್ಳಾರಿ : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಶ್ಯಾಮ್ ಪ್ರಸಾದ್ ಮುಖರ್ಜಿ ರೂಬರ್ನ್ ಮಿಷನ್ ಅಡಿಯಲ್ಲಿ ಬಳ್ಳಾರಿ/ವಿಜಯನಗರ ಜಿಲ್ಲೆಯಲ್ಲಿ ಆಯ್ಕೆಯಾದ 04 ಕ್ಲಸ್ಟರ್ ಗಳಿಗೆ ಸಂಬಂಧಿಸಿದಂತೆ ಬಳ್ಳಾರಿ / ವಿಜಯನಗರ ಜಿಲ್ಲೆಯಲ್ಲಿ ಕ್ಲಸ್ಟರ್ ವಾರು ಪ್ರಗತಿ ಮತ್ತು ಮೇಲ್ವಿಚಾರಣೆ ಮಾಡಲು DPMU ಹಾಗೂ CDMU ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾನವ ಸಂಪನ್ಮೂಲ ‌ಸಂಸ್ಥೆಯ ಮೂಲಕ ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ವಿವರ ಈ ಕೆಳಗಿನಂತಿವೆ :

    ಹುದ್ದೆ : ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಯುನಿಟ್ ( DPMU) ಬಳ್ಳಾರಿ, ವಿಜಯನಗರ

    1. ರೀಜಿನಲ್ ಪ್ಲ್ಯಾನಿಂಗ್ ಸ್ಪೆಷಲಿಸ್ಟ್ -02
    2. ರೂರಲ್ ಡೆವಲಪ್ಮೆಂಟ್ ಮ್ಯಾನೇಜ್ಮೆಂಟ್ ಸ್ಪೆಷಲಿಸ್ಟ್ -02

    ಕ್ಲಸ್ಟರ್ ಡೆವಲಪ್ಮೆಂಟ್ ಮ್ಯಾನೇಜ್ಮೆಂಟ್ ಯುನಿಟ್ ( CDMU)

    1. ಇಂಜಿನಿಯರಿಂಗ್ ಸ್ಪೆಷಲಿಸ್ಟ್ – 04
      2.ಸ್ಪೆಷಲ್ ಪ್ಲಾನಿಂಗ್ ಪ್ರೊಫೆಷನಲ್ – 04

    3. ರೂರಲ್ ಮ್ಯಾನೇಜ್ಮೆಂಟ್ ಪ್ರೊಫೆಷನಲ್ -04

    ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 25 ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.

    ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ವಿದ್ಯಾರ್ಹತೆ ಹಾಗೂ ಇತರೆ ದಾಖಲೆಗಳನ್ನು ಸ್ವಯಂ ದೃಢೀಕರಿಸಿ ಮಾನ್ಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್, ಬಳ್ಳಾರಿ ( ಡಿ.ಆರ್.ಡಿ.ಎ) ಶಾಖೆ, ಕೋಟೆ,ಬಳ್ಳಾರಿ – 583102 ರವರ ಹೆಸರಿಗೆ ಖುದ್ದಾಗಿ/ ಅಂಚೆ ಮೂಲಕ ಅಥವಾ ಇ- ಮೇಲ್ ಮೂಲಕ [email protected] ನಲ್ಲಿ ದಿನಾಂಕ 14-06-2021 ಮಧ್ಯಾಹ್ನ 1.30 ಗಂಟೆಯವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

  • BBMP : 78 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    BBMP : 78 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಗೊಳ್ಳಿ ರಾಯಣ್ಣ ಕೋವಿಡ್ ಆಸ್ಪತ್ರೆ, ಬಿಬಿಎಂಪಿ ವಾರ್ಡ್ ನಂ.126, ಜಿಕೆಡ್ಬ್ಲ್ಯು ಲೇಔಟ್, 4 ನೇ ಅಡ್ಡ ರಸ್ತೆ, ಸಂಗೊಳ್ಳಿ ರಾಯಣ್ಣ ಸ್ಟೇಡಿಯಂ ಕಾಂಪ್ಲೆಕ್ಸ್, ಬೆಂಗಳೂರು – 560040 ಕೋವಿಡ್-19 ರೋಗಿಗಳನ್ನು ನಿರ್ವಹಿಸಲು ಅವಶ್ಯವಿರುವ ಅಧಿಕಾರಿ/ ಸಿಬ್ಬಂದಿಗಳ ಹುದ್ದೆಗಾಗಿ 03 ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವಾಕ್- ಇನ್- ಪ್ರಕ್ರಿಯೆ ಮೂಲಕ ಸೇವೆಯನ್ನು ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ: ಅರಿವಳಿಕೆ ತಜ್ಞ : 4 ಹುದ್ದೆಗಳು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರಿವಳಿಕೆ ಭಾರತೀಯ ವೈದ್ಯಕೀಯ ಸಂಸ್ಥೆಯಿಂದ ಮಾನ್ಯತೆ ಪಡೆದ ಸ್ನಾತಕೋತ್ತರ ಪದವಿ/ ಡಿಪ್ಲೋಮಾ/ ಡಿಎನ್ ಬಿ ಪಡೆದಿರಬೇಕು. ಈ ಹುದ್ದೆಗೆ ಪ್ರತಿ ತಿಂಗಳು ರೂ.1,30,000/- ವೇತನವಿರುತ್ತದೆ.

    ಜನರಲ್ ಫಿಸಿಶಿಯನ್ : 3 ಹುದ್ದೆ. ಈ ಹುದ್ದೆಗೆ ಜನರಲ್ ಮೆಡಿಸಿನ್ ನಲ್ಲಿ ಭಾರತೀಯ ವೈದ್ಯಕೀಯ ಸಂಸ್ಥೆಯಿಂದ ಮಾನ್ಯತೆ ಪಡೆದ ಸ್ನಾತಕೋತ್ತರ ಪದವಿ/ ಡಿಎನ್ ಬಿ ಪಡೆದಿರಬೇಕು. ಈ ಹುದ್ದೆಗೆ ಮಾಸಿಕ ರೂ. 1,30,000/- ವೇತನವಿರುತ್ತದೆ.

    ಎಂಬಿಬಿಎಸ್ ಡಾಕ್ಟರ್ಸ್ : 20 ಹುದ್ದೆಗಳು. ಈ ಹುದ್ದೆಗೆ ಭಾರತೀಯ ವೈದ್ಯಕೀಯ ಸಂಸ್ಥೆಯಿಂದ ಮಾನ್ಯತೆ ಪಡೆದ ಎಂಬಿಬಿಎಸ್ ಪದವಿ ಪಡೆದಿರಬೇಕು. ಈ ಹುದ್ದೆಗೆ ರೂ.80,000/- ಮಾಸಿಕ ವೇತನ‌ ನಿಗದಿಪಡಿಸಲಾಗಿದೆ.

    ಸ್ಟಾಫ್ ನರ್ಸ್ : 40 ಹುದ್ದೆಗಳು. ಈ ಹುದ್ದೆಗೆ ನರ್ಸಿಂಗ್ ನಲ್ಲಿ ಕರ್ನಾಟಕ ನರ್ಸಗ್ ಸಂಸ್ಥೆಯಿಂದ ಮಾನ್ಯತೆ ಪಡೆದ ಬಿಎಸ್ಸಿ/ ಜಿಎನ್ ಎಂ/ ಡಿಪ್ಲೋಮಾ ಪಡೆದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.30,000/- ವೇತನವಿರುತ್ತದೆ.

    ಉಸಿರಾಟದ ಚಿಕಿತ್ಸಕ : 3 ಹುದ್ದೆಗಳು. ಈ ಹುದ್ದೆಗೆ ಅಭ್ಯರ್ಥಿಗಳು ಉಸಿರಾಟ ಚಿಕಿತ್ಸೆಯಲ್ಲಿ ಬಿಎಸ್ಸಿ ಪದವಿ ಪಡೆದಿರಬೇಕು. ಈ ಹುದ್ದೆಗೆ ಮಾಸಿಕ ರೂ.18,000/- ವೇತನವಿರುತ್ತದೆ.

    ಡಾಟಾ ಎಂಟ್ರಿ ಅಪರೇಟರ್ : 3 ಹುದ್ದೆಗಳು. ಅಭ್ಯರ್ಥಿಗಳು ದ್ವಿತೀಯ ಪಿಯುಸಿಯೊಂದಿಗೆ ಕಂಪ್ಯೂಟರ್ ಡಿಪ್ಲೋಮಾ ಪಡೆದಿರಬೇಕು. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.18,000/- ವೇತನವಿರುತ್ತದೆ.

    ಲ್ಯಾಬ್ ಟೆಕ್ನಿಶಿಯನ್: 3 ಹುದ್ದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಡಿಎಂಎಲ್ ಟಿ ಪಡೆದಿರಬೇಕು. ಈ ಹುದ್ದೆಗೆ ಮಾಸಿಕ ರೂ.25,000/- ವೇತನವಿರುತ್ತದೆ.

    ಫಾರ್ಮಸಿಸ್ಟ್ :2 ಹುದ್ದೆ. ಈ ಹುದ್ದೆಗೆ ಅಭ್ಯರ್ಥಿಗಳು ಕರ್ನಾಟಕ ಫಾರ್ಮೆಸಿ ಕೌನ್ಸಿಲ್ ನಿಂದ ಮಾನ್ಯತೆ ಪಡೆದ ಡಿ ಫಾರ್ಮಾ. ಬಿ.ಫಾರ್ಮಾ/ ಎಂ ಫಾರ್ಮಾ ಪಡೆದಿರಬೇಕು. ಈ ಹುದ್ದೆಗೆ ಮಾಸಿಕ ರೂ.15,000/- ವೇತನವಿರುತ್ತದೆ.

    ಅಭ್ಯರ್ಥಿಗಳು ದಿನಾಂಕ 05-06-2021 ಶನಿವಾರ.

    ಸಂದರ್ಶನ ನಡೆಯುವ ಸ್ಥಳ : ದಾಸಪ್ಪ ಮೀಟಿಂಗ್ ಹಾಲ್, 1 ನೇ ಮಹಡಿ, ಟೌನ್ ಹಾಲ್ ಹತ್ತಿರ, ಸಮಯ ಸಂಜೆ 10:00 ರಿಂದ ಸಂಜೆ 4:30 ಗಂಟೆಗೆ