ದೈಹಿಕ ಶಿಕ್ಷಣ ಶಿಕ್ಷಕರಿಗೆ ಪರಿವೀಕ್ಷಕರ ಹುದ್ದೆಗೆ ಭಡ್ತಿ : ಎಸ್.ಸುರೇಶ್ ಕುಮಾರ್ ಹೇಳಿಕೆ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಸರಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್ -1 ಹುದ್ದೆಯಿಂದ ಗ್ರೂಪ್ ಬಿ ವೃಂದದ 148 ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿದೆ. ಈ ರೀತಿಯಾಗಿ ಕರ್ನಾಟಕ ರಾಜ್ಯ ಸರಕಾರಿ ಪ್ರೌಢ ಶಾಲಾ ದೈಹಿಕ ಸಂಘದ ಬಹುದಿನಗಳ ಬೇಡಿಕೆಯನ್ನು ಪೂರೈಸಿದೆ.

ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆಯು 2016 ರಲ್ಲಿ ನಡೆದಿತ್ತು. ಈ ಬಡ್ತಿ ಪ್ರಕ್ರಿಯೆಯು 5 ವರ್ಷಗಳ ಬಳಿಕ ನಡೆದಿದ್ದು , ಆಡಳಿತಾತ್ಮಕ ಸಮಸ್ಯೆಯನ್ನು ಬಗೆಹರಿಸಿದೆ ಎಂದಿದ್ದಾರೆ.

ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗಳಿಗೆ ಜೂನ್ 21 ರಂದು ಕೌನ್ಸಿಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಅನುಸರಿಸಿ ದೈಹಿಕ ಶಿಕ್ಷಕರು ಕೌನ್ಸಿಲಿಂಗ್ ನಲ್ಲಿ ಭಾಗವಹಿಸಿದರು ಮತ್ತು ಆಸಕ್ತಿಯುಳ್ಳ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ.

Leave a Comment