RDPR : ವಿವಿಧ ಹುದ್ದೆ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ವಿವರಗಳು, ಕಾರ್ಯಾನುಭವ, ವಿದ್ಯಾರ್ಹತೆಗಳನ್ನು ಈ ಕೆಳಗೆ ನೀಡಲಾಗಿದೆ.

ಜಿಲ್ಲಾ ಪಂಚಾಯತಿ ಕಚೇರಿ – ಜಲ ಜೀವನ ಮಿಷನ್
ಹುದ್ದೆ : ಜಿಲ್ಲಾ MIS ಸಮಾಲೋಚಕರು – 05 ಹುದ್ದೆಗಳು

ಜಿಲ್ಲಾ ಪಂಚಾಯತಿ ಕಚೇರಿ – ಸ್ವಚ್ಛ ಭಾರತ್ ಮಿಷನ್
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು – 01
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು – 01

ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷ ಮೀರಿರಬಾರದು.

ಹುದ್ದೆ ಸ್ಥಳ : ಬೆಂಗಳೂರು-ಚಿಕ್ಕಬಳ್ಳಾಪುರ-ಹರಪನಹಳ್ಳಿ- ಕೊಡಗು

ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ಅರ್ಜಿ ಜೊತೆಗೆ ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಪ್ರಮುಖ ಸಾಮರ್ಥ್ಯ ಗಳು, ಅನುಭವ ಮತ್ತು resume ನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ ಬೆಂಗಳೂರು- 5600- 009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ 05-07-2021 ರ ಸಂಜೆ 5:30 ರೊಳಗೆ ಸಲ್ಲಿಸಬೇಕು. ನಂತರ ಬಂದ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ https://rdpr.karnataka.gov.in ಮತ್ತು https://swachhamevajayate.org ಗೆ ಭೇಟಿ ನೀಡಬಹುದು.

Leave a Comment