ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಕರ್ನಾಟಕ ರಾಜ್ಯ ಕುಡಿಯುವ ನೀರು ಮತ್ತು ಗ್ರಾಮಿಣ ನೈರ್ಮಲ್ಯ ಇಲಾಖೆಯು ಸ್ವಚ್ಛ ಭಾರತ್ ಮಿಶನ್ – ಗ್ರಾಮೀಣ ಜಲಜೀವನ ಯೋಜನೆ ಅನುಷ್ಠಾನಕ್ಕೆ ತಂದು ಅಭಿವೃದ್ಧಿ ಪಡಿಸುತ್ತಿದೆ. ಈ ಯೋಜನೆಯ ಅಭಿವೃದ್ಧಿಯ ಸಲುವಾಗಿ ಇಲಾಖೆಯು ಅಗತ್ಯ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ( RDPR) ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ( ಗ್ರಾಮೀಣ) ಯೋಜನೆಯಡಿ ಕೇಂದ್ರ ಕಚೇರಿ ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.

ಕೇಂದ್ರ ಕಚೇರಿ:
ಹುದ್ದೆ : ಜ್ಯೂನಿಯರ್ ಕನ್ಸಲ್ಟೆಂಟ್ ( ಎಕ್ಸಿಕ್ಯುಟಿವ್ ಇಂಜಿನಿಯರ್ ಲೆವಲ್) – 1 ಹುದ್ದೆ
ಮಾನಿಟರಿಂಗ್ ಆಂಡ್ ಇವ್ಯಾಲ್ಯುಯೇಷನ್ ಎಕ್ಸೊರ್ಟ್ – 1 ಹುದ್ದೆ

ಜಿಲ್ಲಾ ಪಂಚಾಯತ ಕಚೇರಿ: ಜಲ ಜೀವನ್ ಮಿಶನ್ ಮತ್ತು ಸ್ವಚ್ಛ ಭಾರತ ಮಿಶನ್ ( ಗ್ರಾಮೀಣ)
ಡಿಸ್ಟ್ರಿಕ್ಟ್ ಪ್ರಾಜೆಕ್ಟ್ ಮ್ಯಾನೇಜರ್ – 02 ಹುದ್ದೆ
ಎಂಐಎಸ್ ಕನ್ಸಲ್ಟೆಂಟ್ – 03 ಹುದ್ದೆ
ಡಿಸ್ಟ್ರಿಕ್ಟ್‌ ಸ್ಯಾನಿಟೈಜೇಶನ್ ಮತ್ತು ಹೈಜಿನ್ ಪ್ರೊಮಿಷನ್ ಕನ್ಸಲ್ಟೆಂಟದ (ಎಸ್ ಹೆಚ್ )- 02 ಹುದ್ದೆ
ಸಾಲಿಡ್ ಆಂಡ್ ಲಿಕ್ವಿಡ್ ವೇಸ್ಟ್ ಮ್ಯಾನೆಜ್‌ಮೆಂಟ್‌ ಕನ್ಸಲ್ಟೆಂಟ್ – 03 ಹುದ್ದೆ

ವಯೋಮಿತಿ : ಈ ಪ್ರಕಟಣೆ ಪ್ರಕಟಗೊಂಡ ದಿನದಂದು ಅಭ್ಯರ್ಥಿಗಳ ವಯೋಮಿತಿಯು 45 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16-08-2021 ಸಂಜೆ 5.30 ರೊಳಗೆ.

ಅರ್ಜಿ ಸಲ್ಲಿಕೆ ಹೇಗೆ?
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಫೀಶಿಯಲ್ ವೆಬ್ ಸೈಟ್ ನಲ್ಲಿ ನೀಡಲಾದ ನಿಗದಿತ ಅರ್ಜಿ ನಮೂನೆಗಳನ್ನು ಹುದ್ದೆಗಳಿಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ.ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು -560009

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Comment