Tag: kalaburagi

  • ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

    ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಲಬುರಗಿ ಇಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-07-2021

    ಹುದ್ದೆ : ಗ್ರೂಪ್ ಡಿ ದಲಾಯತರ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಹತೆ ; ಮಾಜಿ ಸೈನಿಕರಾಗಿರಬೇಕು.10 ನೇ ತರಗತಿ ಪಾಸಾಗಿರಬೇಕು. 18 ರಿಂದ 52 ವರ್ಷಗಳ ಒಳಗೆ ಇರಬೇಕು.

    ಅರ್ಜಿ ನಮೂನೆಯನ್ನು ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಚೇರಿಯಿಂದ ಜೂನ್ 15 ರಿಂದ 30 ರೊಳಗೆ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಉಪ‌ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಿನಿವಿಧಾನಸೌಧ, ಕಲಬುರಗಿ ಇಲ್ಲಿಗೆ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ 08472225003 ಗೆ ಸಂಪರ್ಕಿಸಬಹುದು.

  • ವಿಪತ್ತು ನಿರ್ವಹಣಾ ಯೋಜನೆ ಕಲಬುರಗಿ: ಹುದ್ದೆಗಳಿಗೆ ಅರ್ಜಿ ಆಹ್ವಾನ

    ವಿಪತ್ತು ನಿರ್ವಹಣಾ ಯೋಜನೆ ಕಲಬುರಗಿ: ಹುದ್ದೆಗಳಿಗೆ ಅರ್ಜಿ ಆಹ್ವಾನ

    ವಿಪತ್ತು ನಿರ್ವಹಣಾ ಯೋಜನೆ ಕಲಬುರಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವನ್ನು ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 26 ಮಧ್ಯಾಹ್ನ 1.30 ರೊಳಗೆ. ಕೊನೆ ದಿನದ ಬಳಿಕ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

    ಹುದ್ದೆ : ಜಿಲ್ಲಾ ವಿಪತ್ತು ನಿರ್ವಹಣೆಗಾರ ( district disaster Professional ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಯೋಮಿತಿ : ಅಭ್ಯರ್ಥಿಗಳು ವಯೋಮಿತಿಯು 65 ವರ್ಷ ಮೀರಿರಬಾರದು.

    ಕೆಲಸದ ಅವಧಿ : 12 ತಿಂಗಳ ಅವಧಿಯ ಮೇರೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪಡೆದಿರಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಪತ್ತು ನಿರ್ವಹಣೆ, ಸಾಮಾಜಿಕ ಕಾರ್ಯ, ಸಮಾಜ ಶಾಸ್ತ್ರ, ಕೃಷಿ, ವಾಸ್ತುಶಿಲ್ಪ, ಇಂಜಿನಿಯರಿಂಗ್ ನಗರ ಯೋಜನೆ ಹಾಗೂ ಇನ್ನಿತರ ಸಾಮಾಜಿಕ ವಿಜ್ಞಾನದಲ್ಲಿ ಪದವಿ ಪಡೆದವರಿಗೆ ಮೊದಲ ಆದ್ಯತೆ ನೀಡಲಾಗುವುದು.
    5 ವರ್ಷಗಳ ಅನುಭವ ಇರಬೇಕು. ಪಿಎಚ್ಡಿ ಪಡೆದ ಅಭ್ಯರ್ಥಿಗಳಿಗೆ 3 ವರ್ಷಗಳ ಅನುಭವ ಇರಬೇಕು.

    ಕನ್ನಡ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಉತ್ತಮ ಹಿಡಿತ ಹಾಗೂ ಉತ್ತಮ ಸಂವಹನ ಕೌಶಲ್ಯ ಹೊಂದಿರಬೇಕು.

    ಎಂ.ಎಸ್.ಆಫೀಸ್ ಮತ್ತು ಇಂಟರ್ನೆಟ್ ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು. ಪ್ರತಿ ಮಾಹೆಗೆ ರೂ. 44,000/- ವೇತನ ನೀಡಲಾಗುವುದು.

    ಅಭ್ಯರ್ಥಿಗಳು ಇತ್ತೀಚಿನ ಸ್ವ ವಿವರಗಳೊಂದಿಗೆ ಸ್ವಯಂ ದೃಢೀಕರಿಸಿದ ಶೈಕ್ಷಣಿಕ ಮತ್ತು ಅನುಭವ ಪ್ರಮಾಣ ಪತ್ರಗಳೊಂದಿಗೆ ಅರ್ಜಿಯನ್ನು ಜಿಲ್ಲಾಧಿಕಾರಿಗಳು( ವಿಪತ್ತು ನಿರ್ವಹಣಾ ಕೋಶ ) ಕಲಬುರಗಿ -585102 ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂ.ಸಂಖ್ಯೆ 08472- 278677 ಗೆ ಸಂಪರ್ಕಿಸಬಹುದು.

  • ಕಲಬುರಗಿ : ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

    ಕಲಬುರಗಿ : ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

    ಸೇಡಂ ತಾಲೂಕಿನ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಅತಿಥಿ ಶಿಕ್ಷಕರ ನೇಮಕಾತಿ

    ಅರ್ಜಿ ಸಲ್ಲಿಸಬೇಕಾದ ಕೊನೆಯ ದಿನಾಂಕ : ಎಪ್ರಿಲ್ 10, 2021

    ಸಮಾಜ ಕಲ್ಯಾಣ ಇಲಾಖೆ ( ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ) ವ್ಯಾಪ್ತಿಯಲ್ಲಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಖಾಲಿ ಇರುವ ಸಮಾಜ ವಿಜ್ಞಾನ ( ಆಂಗ್ಲ ಮಾಧ್ಯಮ ) ಅತಿಥಿ ಶಿಕ್ಷಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

    ವಿದ್ಯಾರ್ಹತೆ : ಅರ್ಜಿಗಳನ್ನು ಸಲ್ಲಿಸುವವರು ಬಿ.ಎ, ಬಿ.ಇಡಿ ಪಾಸಾಗಿರಬೇಕು. ಶಿಕ್ಷಕರನ್ನು ಗೌರವ ಧನದ ಆಧಾರದ ಮೇಲೆ ಶಾಲಾ ಹಂತದಲ್ಲಿ ನಿಯಮಾವಳಿಗೆ ಒಳಪಟ್ಟು ನೇಮಕ ಮಾಡಲಾಗುವುದು. ನಿವೃತ ಶಿಕ್ಷಕರು ಕೂಡಾ ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಶೈಕ್ಷಣಿಕ ದಾಖಲೆಗಳೊಂದಿಗೆ 2021, ಎಪ್ರಿಲ್ 10 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕೋಡ್ಲಾ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ : 8747924789