Tag: Karnataka Jobs

  • ಇಂಗ್ಲೀಷ್ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ

    ಶ್ರೀ ಜನಾರ್ದನ ಎಜ್ಯುಕೇಶನ್ ಟ್ರಸ್ಟ್ ( ರಿ) ಎಳ್ಳಾರೆ , ಈ ವಿದ್ಯಾಸಂಸ್ಥೆಗೆ ಇಂಗ್ಲೀಷ್ ಶಿಕ್ಷಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು. ವಿವರಗಳು ಈ ಕೆಳಗಿನಂತಿವೆ :

    ಶ್ರೀ ಜನಾರ್ಧನ ಪ್ರಾಥಮಿಕ ಶಾಲೆ ಎಳ್ಳಾರೆ – ಡಿ.ಎಡ್/ ಬಿ.ಎಡ್ ಇಂಗ್ಲೀಷ್ ಶಿಕ್ಷಕಿ -01 ಹುದ್ದೆ
    ಶ್ರೀ ಜನಾರ್ದನ ಪ್ರಾಥಮಿಕ ಶಾಲೆ ಎಳ್ಳಾರೆ – ಪದವೀಧರರು ‌ಇಂಗ್ಲೀಷ್ ಸ್ಪೋಕನ್ – 01 ಹುದ್ದೆ

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಸಕ್ತ ಅಭ್ಯರ್ಥಿಗಳು ದಿನಾಂಕ 30-06-2021ನೇ ಬುಧವಾರದ ಒಳಗೆ ಅರ್ಜಿಯನ್ನು ಸ್ವಯಂ ವಿವರಗಳೊಂದಿಗೆ ( ರೆಸ್ಯೂಮ್) ಸ್ಬಯ ಜಲ ಹಸ್ತಾಕ್ಷರದಲ್ಲಿ ಬರೆದು ದೂರವಾಣಿ ಸಂಖ್ಯೆಯೊಂದಿಗೆ ವಿದ್ಯಾಸಂಸ್ಥೆಗೆ ಸಲ್ಲಿಸುವುದು.

    ಅಭ್ಯರ್ಥಿಗಳು ಇ- ಮೇಲ್ ಮುಖಾಂತರವೂ ಅರ್ಜಿಯನ್ನು ಸಲ್ಲಿಸಬಹುದು.

    ಇ-ಮೇಲ್ ವಿಳಾಸ ಈ ಕೆಳಗೆ ನೀಡಲಾಗಿದೆ : [email protected]

  • ಶಿಕ್ಷಣ ಇಲಾಖೆ ನಾನ್‌ ಟೀಚಿಂಗ್ ಪೋಸ್ಟ್‌ ನೇಮಕ ಶೀಘ್ರದಲ್ಲೇ

    ಶಿಕ್ಷಣ ಇಲಾಖೆ ನಾನ್‌ ಟೀಚಿಂಗ್ ಪೋಸ್ಟ್‌ ನೇಮಕ ಶೀಘ್ರದಲ್ಲೇ

    ಸಾರ್ವಜನಿಕ ಶಿಕ್ಷಣ ಇಲಾಖೆಯಡಿಯ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಶೀಘ್ರದಲ್ಲೇ ಎಸ್‌ಡಿಎ, ಎಫ್‌ಡಿಎ, ಗ್ರೂಪ್ ಡಿ ನೌಕರರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸುವ ಸಾಧ್ಯತೆ ಇದೆ.

    ಎಲ್ಲಾ ಶಾಲೆಗಳು ಕಾಲೇಜುಗಳು, ಕಛೇರಿಗಳಲ್ಲಿನ ಬೋಧಕೇತರ ನೌಕರರ ವೃಂದವಾರು ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಮತ್ತು ಗ್ರೂಪ್ ಡಿ ನೌಕರರ ವೃಂದದ ನಿಖರವಾದ ಖಾಲಿ ಹುದ್ದೆಗಳ ಮಾಹಿತಿಯನ್ನು ಸಾರ್ವಜನಿಕ ಇಲಾಖೆಯು ಕೇಳಿರಿವುದರಿಂದ ನಂತರದಲ್ಲಿ ಶಿಕ್ಷಣ ಇಲಾಖೆಯಡಿ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡುವ ಕಾರ್ಯವು ನಡೆಯಲಿದೆ.

    ಇದರ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ದಿನಾಂಕ 20-೦5-2021 ರೊಳಗೆ ದೃಢೀಕರಣದೊಂದಿಗೆ ಇ-ಮೇಲ್ [email protected] ಮೂಲಕ ಸಲ್ಲಿಸಲು ಸೂಚಿಸಲಾಗಿದೆ.

    ನಿಗದಿತ ನಮೂನೆಯಲ್ಲಿ ಖಾಲಿ ಹುದ್ದೆಗಳ ವಿವರಗಳನ್ನು ಸಲ್ಲಿಸಲು ಶಿಕ್ಷಣ ಇಲಾಖೆಯು ಸೂಚಿಸಿದೆ.

  • ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ : ಬೋಧಕೇತರ ಹುದ್ದೆ

    ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ : ಬೋಧಕೇತರ ಹುದ್ದೆ

    ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ತಾತ್ಕಾಲಿಕವಾಗಿ ಸಂಚಿತ ವೇತನದ ಆಧಾರದ ಮೇಲೆ ವಿವಿಧ ಬೋಧಕೇತರ ಹುದ್ದೆಗಳ ನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ವಿವರಗಳನ್ನು ಕರ್ನಾಟಕ ವಿಶ್ವವಿದ್ಯಾಲಯದ ಅಂತರ್ಜಾಲ ತಾಣವಾದ www.kud.ac.in ರ ನೋಟಿಫಿಕೇಶನ್ ಕಾಲದಿಂದ ಪಡೆದು ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ‌ಅಗತ್ಯ ದಾಖಲೆಗಳೊಂದಿಗೆ ದಿನಾಂಕ 05-06-2021 ಅಥವಾ ಸದರಿ ದಿನಾಂಕ ಮತ್ತು ನಂತರದಲ್ಲಿಯೂ ಸಹ ಲಾಕ್ ಡೌನ್ ಇದ್ದಲ್ಲಿ ಲಾಕ್ ಡೌನ್ ಅವಧಿ‌ ಮುಗಿದ ನಂತರ ದಿನಾಂಕದಂದು ಮುಂದಿನ 10 ಕರ್ತವ್ಯದ ದಿನಗಳೊಳಗಾಗಿ ಕಚೇರಿ ವೇಳೆಯಲ್ಲಿ ವಿಶ್ವವಿದ್ಯಾಲಯದ ಅವಕ ವಿಭಾಗದಲ್ಲಿ ಸಲ್ಲಿಸಲು ತಿಳಿಸಲಾಗಿದೆ. ಹುದ್ದೆಗಳ ವಿವರ, ವಿದ್ಯಾರ್ಹತೆ, ಸಂಚಿತ ವೇತನ ಮತ್ತು ಇತರೆ ಹೆಚ್ಚಿನ ವಿವರಗಳಿಗಾಗಿ ವಿಶ್ವವಿದ್ಯಾಲಯದ ಅಂತರ್ಜಾಲ ತಾಣವನ್ನು ವೀಕ್ಷಿಸಲು ಸೂಚಿಸಲಾಗಿದೆ.

  • ಕರ್ನಾಟಕ ವಿಶ್ವವಿದ್ಯಾಲಯ: ಹಲವು ಉದ್ಯೋಗವಕಾಶ

    ಕರ್ನಾಟಕ ವಿಶ್ವವಿದ್ಯಾಲಯ: ಹಲವು ಉದ್ಯೋಗವಕಾಶ

    ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ : ಸಹಾಯಕ ನಿರ್ದೇಶಕರು (ಕವಿವಿ ಮುದ್ರಣಾಲಯ) – 01 (ಸಾಮಾನ್ಯ)
    ಕಾರ್ಯಗಾರ ಅಧಿಕಾರಿಗಳು/ವ್ಯವಸ್ಥಾಪಕರು -01 ( ಸಾಮಾನ್ಯ)
    ಕಿರಿಯ ಇಂಜಿನಿಯರ್ (ಸಿವಿಲ್) -02 ( 01 – ಪರಿಶಿಷ್ಟ ಜಾತಿ, 01- ಸಾಮಾನ್ಯ)
    ವರ್ಕ್ ಸುಪರ್ ವೈಸರ್ – 02 ( ಪರಿಶಿಷ್ಟ ಜಾತಿ -01, ಸಾಮಾನ್ಯ – 01)

    ಎಲೆಕ್ಟ್ರಿಶಿಯನ್ : 3 ಹುದ್ದೆ ( ಪರಿಶಿಷ್ಟ ಜಾತಿ -1, ಸಾಮಾನ್ಯ -1, ಪರಿಶಿಷ್ಟ ಪಂಗಡ -1)

    ಫಿಟ್ಟರ್ – 1 ( ಸಾಮಾನ್ಯ)

    ಸಹಾಯಕ ತೋಟಗಾರಿಕೆ – 1 ( ಸಾಮಾನ್ಯ )

    ಸಹಾಯಕ – 1 ( ಸಾಮಾನ್ಯ )

    ಪ್ಲೇಸ್ ಮೆಂಟ್ ಅಧಿಕಾರಿ – 1 ( ಸಾಮಾನ್ಯ )

    ಆಯ್ಕೆ ಮಾಡುವ ವಿಧಾನ : ಪೂರ್ಣ ವಿವರಗಳನ್ನು ಭರ್ತಿ ಮಾಡಿ ಸಲ್ಲಿಸಿದ ಮತ್ತು ಎಲ್ಲಾ ಅರ್ಹತೆಗಳನ್ನು ಪೂರೈಸುವ ಅಭ್ಯರ್ಥಿಗಳಿಗೆ ವಿಶ್ವವಿದ್ಯಾಲಯದ ವತಿಯಿಂದ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.

    ವಯೋಮಿತಿ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.

    ಪ್ರವರ್ಗ 2a, 2b, 3a,3b ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 38 ವಯೋಮಿತಿ ಇರಬೇಕು.

    ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ 18 ಹಾಗೂ 35 ವಯೋಮಿತಿ ಹೊಂದಿರಬೇಕು.

    ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿಗಳನ್ನು ವಿಶ್ವವಿದ್ಯಾಲಯದ ಅಂತರ್ಜಾಲ www.kud.ac.in ರ ನೋಟಿಫಿಕೇಶನ್ ಕಾಲಂ ನಿಂದ ಪಡೆದುಕೊಂಡು ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 05-06-2021 ಅಥವಾ ಸದರಿ ದಿನಾಂಕ ಮತ್ತು ನಂತರದಲ್ಲಿಯೂ ಸಹ ಲಾಕ್ ಡೌನ್ ಇದ್ದಲ್ಲಿ ಲಾಕ್ ಡೌನ್ ಮುಗಿದ ದಿನಾಂಕದಿಂದ ಮುಂದಿನ 10 ಕರ್ತವ್ಯದ ದಿನಗಳೊಳಗಾಗಿ ‌ಕಚೇರಿ ವೇಳೆಯಲ್ಲಿ ವಿಶ್ವವಿದ್ಯಾಲಯದ ಅವಕ ವಿಭಾಗದಲ್ಲಿ ಸಲ್ಲಿಸುವುದು.

  • ಕರ್ನಾಟಕ ಉಚ್ಛ  ನ್ಯಾಯಲಯದಲ್ಲಿ ವಿವಿಧ ಹುದ್ದೆ

    ಕರ್ನಾಟಕ ಉಚ್ಛ ನ್ಯಾಯಲಯದಲ್ಲಿ ವಿವಿಧ ಹುದ್ದೆ

    ಕರ್ನಾಟಕ ಹೈ ಕೋರ್ಟ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು ದಿನಾಂಕ 29 ಮೇ 2021 ಕೊನೆಯ ದಿನವಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28-04-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-05-2021

    ಒಟ್ಟು ಹುದ್ದೆ : 19
    ಹುದ್ದೆ ಸ್ಥಳ : ಬೆಂಗಳೂರು – ಕರ್ನಾಟಕ
    ಹುದ್ದೆ : ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ಸ್
    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 20,000/- ನಿಗದಿಪಡಿಸಲಾಗಿದೆ.
    ವಿದ್ಯಾರ್ಹತೆ : ಲಾ ಡಿಗ್ರಿಯನ್ನು ಅಭ್ಯರ್ಥಿಗಳು ಅಂಗೀಕೃತ ಬೋರ್ಡ್ ಅಥವಾ ಯುನಿವರ್ಸಿಟಿಯಿಂದ ಪಡೆದುಕೊಂಡಿರಬೇಕು.
    ಅರ್ಜಿ ಶುಲ್ಕ : ಅಭ್ಯರ್ಥಿಯ ವಯೋಮಿತಿಯು 30 ವರ್ಷ ಮೀರಿರಬಾರದು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಅನುಕಂಪದ ನೌಕರಿ : ಬದಲಾವಣೆ ತಂದ ಸರಕಾರ

    ಅನುಕಂಪದ ನೌಕರಿ : ಬದಲಾವಣೆ ತಂದ ಸರಕಾರ

    ಸರಕಾರಿ ನೌಕರರು ಅಕಾಲಿಕ ಮರಣಕ್ಕೀಡಾದ ಸಂದರ್ಭದಲ್ಲಿ ಅನುಕಂಪ ಆಧಾರಿತ ಹುದ್ದೆಗಳನ್ನು ಮೃತರ ಮಗಳಿಗೂ ನೀಡಬಹುದು ಎಂಬ ಆದೇಶವನ್ನು ರಾಜ್ಯ ಸರಕಾರ ಹೊರಡಿಸಿದೆ.

    ಕರ್ನಾಟಕ ಸಿವಿಲ್ ಸೇವಾ(ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು 1966 ಕ್ಕೆ ತಿದ್ದುಪಡಿ ತಂದಿದ್ದು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಶುಕ್ರವಾರ ತಿಳಿಸಿದೆ.

    ಮೃತ ಸರಕಾರಿ ನೌಕರರ ಪತಿ ಅಥವಾ ಪತ್ನಿ ಸೂಚಿಸುವ ಅವಿವಾಹಿತ, ವಿವಾಹಿತ ಅಥವಾ ವಿಚ್ಛೇಧಿತ ಮಗಳಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗವನ್ನು ನೀಡಬಹುದು ಎಂಬುದಾಗಿದೆ.

    ಮೃತ ನೌಕರರು ಅವಿವಾಹಿತರಾಗಿದ್ದರೆ ಅವರ ತಂದೆ ಅಥವಾ ತಾಯಿ ಸೂಚಿಸಿದ ಸಹೋದರ ಅಥವಾ ಸಹೋದರಿಯನ್ನು ನೇಮಕಾತಿ ಮಾಡಲು ಅವಕಾಶವಿದೆ. ಒಂದು ವೇಳೆ ತಂದೆ ತಾಯಿಯೂ ಮೃತಪಟ್ಟಿದ್ದರೆ ವಯಸ್ಸಿನ ಆಧಾರದ ಮೇಲೆ ಹಿರಿಯ ಸಹೋದರ ಅಥವಾ ಸಹೋದರಿಗೆ ಅನುಕಂಪದ ಆಧಾರದ ಮೇಲೆ ಕೆಲಸ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ.

    ಮೃತ ಪುರುಷ ವಿವಾಹಿತನಾಗಿದ್ದರೆ ಆತನ ಮೇಲೆ ಅವಲಂಬಿತರಾಗಿದ್ದ ಆತನ ಪತ್ನಿ, ಮಗ ಮತ್ತು ಮಗಳು ಅರ್ಹರಾಗಿರುತ್ತಾರೆ. ಮೃತನ ಪತ್ನಿಯು ಅರ್ಹರಾಗಿಲ್ಲದಿದ್ದರೆ ಅವರು ಸೂಚಿಸಿದ ಮಗ ಅಥವಾ ಮಗಳನ್ನು ನೇಮಕಾತಿ ಮಾಡಿಕೊಳ್ಳಲು ಅವಕಾಶವಿದೆ.

    ವಿವಾಹಿತ ಸರಕಾರಿ ಮಹಿಳಾ ಉದ್ಯೋಗಿ ಮೃತಪಟ್ಟರೆ ಆಕೆಯ ಮೇಲೆ ಅವಲಂಬಿತರಾಗಿರುವ ಮಗ, ಮಗಳು ಅಥವಾ ಪತಿಯು ಅರ್ಹರಾಗಿರುತ್ತಾರೆ. ಅವಿವಾಹಿತೆಯಾಗಿದ್ದರೆ ಆಕೆಯೊಂದಿಗೆ ವಾಸವಿದ್ದ ಸಹೋದರ ಅಥವಾ ಸಹೋದರಿ ಅರ್ಹರಾಗಿರುತ್ತಾರೆ.

    ಮೃತ ನೌಕರರ ಪತಿ ಅಥವಾ ಪತ್ನಿ ಈಗಾಗಲೇ ನಿಧನರಾಗಿದ್ದರೆ ಮಕ್ಕಳು ಅಪ್ರಾಪ್ತರಾಗಿದ್ದರೆ 2 ವರ್ಷದೊಳಗೆ 18 ವರ್ಷ ಪೂರೈಸುವವರಿಗೆ ಅವಕಾಶ ನೀಡಬಹುದು. 18 ವರ್ಷ ತುಂಬಿದ ಬಳಿಕ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರಿಗೆ ಅರ್ಜಿ ಸಲ್ಲಿಸಲು ಎರಡು ವರ್ಷ ಕಾಲಾವಕಾಶ ನೀಡಬೇಕು.

    ಅಪ್ರಾಪ್ತ ಮಕ್ಕಳ ವಯಸ್ಸು ಸೂಕ್ತವಾಗಿಲ್ಲದಿದ್ದರೆ ಅವರೊಂದಿಗೆ ವಾಸಿಸುವ ಹಾಗೂ ಅವರನ್ನು ಪೋಷಿಸುವ ಕಾನೂನಿನ ಪ್ರಕಾರ ಪ್ರಮಾಣೀಕೃತ ಪೋಷಕರು ಅರ್ಹರಾಗುತ್ತಾರೆ ಎಂದು ತಿಳಿಸಲಾಗಿದೆ.