Tag: rdpr

  • RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

    RDPR : ವಿವಿಧ ಹುದ್ದೆ: ಮೇ 01 ಕಡೇ ದಿನಾಂಕ

    ಕರ್ನಾಟಕ ರಾಜ್ಯಪಾಲರ ಪರವಾಗಿ 2021-22 ನೇ ಸಾಲಿನಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಬಾಗಲಕೋಟೆ ಹಾಗೂ ಇದರ ಅಡಿಯಲ್ಲಿ ಬರುವ ಉಪ-ವಿಭಾಗ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ : ಹಿರಿಯ/ಕಿರಿಯ ಮಾದರಿ ವಿಶ್ಲೇಷಗಾರರು ಮತ್ತು ಮಾದರಿ ಸಂಗ್ರಹಗಾರರ ಹುದ್ದೆಗಳಿಗೆ ಷರತ್ತುನ್ವಯ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21-04-2021ರಿಂದ 01-05-2021 ಸಾಯಂಕಾಲ 04.00 ಗಂಟೆಯವರೆಗೆ ( ಪ್ರಕಟಣೆಯನ್ನು ಬದಲಾವಣೆ/ಮುಂದೂಡುವ/ರದ್ದುಪಡಿಸುವ ಹಕ್ಕನ್ನು ಕಾಯ್ದಿರಿಸಲಾಗಿದೆ)

    ನೈರ್ಮಲ್ಯ ಯೋಜನೆಯಲ್ಲಿ ಕೆಲಸ ನಿರ್ವಹಿಸಿದ ಅನುಭವವುಳ್ಳವರಿಗೆ ಮಾತ್ರ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಬಾಗಲಕೋಟೆಯವರಿಂದ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹಿರಿಯ ವಿಶ್ಲೇಷಣಾಗಾರರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/-, ಕಿರಿಯ ವಿಶ್ಲೇಷಣೆಗಾರರು ಹುದ್ದೆಗೆ ಮಾಸಿಕ ರೂ.15,000/-, ನೀರಿನ ಮಾದರಿ ಸಂಗ್ರಹಗಾರರು ಹುದ್ದೆಗೆ ಆಯ್ಕೆಯಾದವರಿಗೆ ಮಾಸಿಕ ರೂ.13,000+2000/- ವೇತನ ವಿರುತ್ತದೆ.

    ವಯೋಮಿತಿ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.
    ವಯೋಮಿತಿ ದೃಢೀಕರಿಸಲು ಎಸ್ಎಸ್‌ಎಲ್‌ಸಿ ಅಂಕಪಟ್ಟಿ ಹಾಜರುಪಡಿಸುವುದು.

    ಆಯ್ಕೆಯಾದ ಅಭ್ಯರ್ಥಿಗಳು ಈ ಜಿಲ್ಲೆಯಲ್ಲಿ ಪ್ರಯೋಗಾಲಯದ ಯಾವುದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸಲು ಮೇಲಾಧಿಕಾರಿಗಳೂ ಸೂಚಿಸಿದ್ದಲ್ಲಿ ನಿರ್ವಹಿಸಲು ಬದ್ಧನಾಗಿರಬೇಕು.

    ಹುದ್ದೆಗಳು ಗುತ್ತಿಗೆಯ ತಾತ್ಕಾಲಿಕ ಖಾಲಿ ಇರುವ ಅವಧಿಗಾಗಿ ಮಾತ್ರ ಇರುತ್ತದೆ.

    ಸ್ವ ವಿವರಗಳೊಂದಿಗೆ ಅರ್ಜಿ ಸಲ್ಲಿಸುವ ವಿಳಾಸ : ಕಾರ್ಯನಿರ್ವಾಹಕ ಇಂಜಿನಿಯರವರ ಕಚೇರಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ , ಹಳೇ ತಹಶೀಲ್ದಾರ ಕಚೇರಿ ಕಟ್ಟಡ, ಬಾಗಲಕೋಟೆ

  • RDPR  : ವಿವಿಧ ಹುದ್ದೆ

    RDPR : ವಿವಿಧ ಹುದ್ದೆ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ‌ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಹಾಗೂ ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ /ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿಯನ್ನು ಕರೆಯಲಾಗಿದೆ.

    ಹುದ್ದೆಗಳ ವಿವರ : 1. ಕೇಂದ್ರ ಕಚೇರಿ- a. ಸಮಾಲೋಚಕರು – 03 b. ಐ.ಟಿ‌.ಸಮಾಲೋಚಕರು- 01 c. ಡಬ್ಲ್ಯೂ.ಕ್ಯೂ.ಎಮ್.ಎಸ್ ಸಮಾಲೋಚಕರು I – 01. d. ಡಬ್ಲ್ಯೂ. ಕ್ಯೂ.ಎಮ್.ಎಸ್ ಸಮಾಲೋಚಕರು 4,5,6 – 03 e. ಡಬ್ಲ್ಯೂ. ಕ್ಯೂ.ಎಮ್.ಎಸ್ ಐ.ಎಮ್.ಐ.ಎಸ್ ಸಮಾಲೋಚಕರು‌- 01

    1. ವೃತ್ತ ಕಚೇರಿ – ಜಲಜೀವನ ಮಿಷನ್
      a. ಹಿರಿಯ ಸಮಾಲೋಚಕರು- 04

    3. ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ – ಜಲಜೀವನ‌ಮಿಷನ್
    a. ಜಿಲ್ಲಾ ಯೋಜನಾ ವ್ಯವಸ್ಥಾಪಕ – 02
    b. ಜಿಲ್ಲಾ MIS ಸಮಾಲೋಚಕರು- 05
    c. ನೀರಿನ ಮಾದರಿಗಳ ಸಂಗ್ರಹಕೋಶದ ಉಸ್ತುವಾರಿ – 32
    d. ಸೂಕ್ಷ್ಮಾಣುಜಿವಿ ಶಾಸ್ತ್ರಜ್ಞ – 80
    e. ಹಿರಿಯ ವಿಶ್ಲೇಷಣೆಗಾರ – 04
    f. ವಿಶ್ಲೇಷಣೆಗಾರ – 06
    g. ಕಿರಿಯ ವಿಶ್ಲೇಷಣೆಗಾರ – 09

    1. ಜಿಲ್ಲಾ ಪಂಚಾಯಿತಿ ಕಛೇರಿ – ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ)
      a. ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು -01
      b. ಜಿಲ್ಲಾ MIS ಸಮಾಲೋಚಕರು -01
      c. ಜಿಲ್ಲಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕರು – 01

    ಗುತ್ತಿಗೆ ಅಥವಾ ಹೊರಗುತ್ತಿಗೆ ಅವಧಿ : ಮೇಲಿನ ಹುದ್ದೆ ಸಂಪೂರ್ಣವಾಗಿ ತಾತ್ಕಾಲಿಕ ‌ಹುದ್ದೆಯಾಗಿದ್ದು, ಒಂದು ವರ್ಷದ ಅವಧಿಗೆ ಗುತ್ತಿಗೆ ಅಥವಾ ಹೊರಗುತ್ತಿಗೆಯ ಆಧಾರದ ಮೇಲೆ‌ ನೇಮಿಸಿಕೊಳ್ಳಲಾಗುವುದು ನಂತರ ಕಾಲಕಾಲಕ್ಕೆ ಅವರ ಕಾರ್ಯಕ್ಷಮತೆಯನ್ನು ಪರಿಶೀಲಿಸಿ ಮತ್ತು ಅಗತ್ಯಕ್ಕೆ ಅನುಗುಣವಾಗಿ ನವೀಕರಿಸಲಾಗುವುದು. ಒಂದೊಮ್ಮೆ ಅಭ್ಯರ್ಥಿಯ ಕಾರ್ಯಕ್ಷಮತೆ ನಿರೀಕ್ಷಿತ ‌ಮಟ್ಟದಲ್ಲಿ ಇಲ್ಲದಿದ್ದರೆ ಅಂತಹ ಅಭ್ಯರ್ಥಿಗಳ ಕರಾರು ಒಪ್ಪಂದವನ್ನು ಒಂದು ತಿಂಗಳ ನೋಟಿಸ್ ನೀಡಿ ರದ್ದು ಪಡಿಸಲಾಗುವುದು.

    ವಯೋಮಿತಿ : ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ಮೀರಿರಬಾರದು.

    ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯ ಗಳು, ಹಾಗೂ ಅರ್ಜಿ ಜೊತೆಗೆ ” ನಿಗದಿತ ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, 2 ನೇ ಮಹಡಿ, ಕೆ.ಹೆಚ್.ಬಿ.ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು – 5600-009 ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು ದಿನಾಂಕ : 28-04-2021 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದಂತಹ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

    ವಿದ್ಯಾರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿಯನ್ನು ದೂರ ಶಿಕ್ಷಣ ಮುಖಾಂತರ ಪಡೆದಿದ್ದರೆ, ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಹಾಗೂ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

    ಆಯ್ಕೆ ಪ್ರಕ್ರಿಯೆ : ಕಿರು ಪಟ್ಟಿ ಮಾಡಿದ ಅಭ್ಯರ್ಥಿಗಳಿಗೆ ಮಾತ್ರ ದೂರವಾಣಿ ಮುಖಾಂತರ ತಿಳಿಸಲಾಗುವುದು.

    ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನವನ್ನು ಕೇಂದ್ರ ಕಛೇರಿ ಹಾಗೂ ಆಯಾ ಜಿಲ್ಲಾ ಪಂಚಾಯತಿ ಕಛೇರಿಯಲ್ಲಿ ವಿಡಿಯೋ ಸಂವಾದದ ಮೂಲಕ ನಡೆಸಲಿದ್ದು‌ ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಹಾಜರಾಗುವುದು ಹಾಗೂ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಿದ್ದು ನಿಗದಿಪಡಿಸಿದ ದಿನಾಂಕ ಮತ್ತು ವೇಳೆಯಲ್ಲಿ ಪರೀಕ್ಷೆಗೆ ಹಾಜರಾಗುವುದು.

    RDPR website: https://rdpr.karnataka.gov.in ಮತ್ತು https://swachhamevajayate.org ( ನೇಮಕಾತಿ ಲಿಂಕ್) ನಲ್ಲಿ ಲಭ್ಯವಿರುತ್ತದೆ.

    ನೋಟಿಫಿಕೇಶನ್‌ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ  Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಲ್ಲಿ Intership ಗಾಗಿ ಅರ್ಜಿ ಆಹ್ವಾನ

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ವಿವಿಧ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಮಹಾತ್ಮಗಾಂಧೀ ನರೇಗಾ ಯೋಜನೆಯ ಅನುಷ್ಠಾನದಲ್ಲಿ ದಾಖಲೀಕರಣದಲ್ಲಿ ನೆರವು ನೀಡಲು ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರ ಅಭ್ಯರ್ಥಿಗಳು ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು.

    ಹುದ್ದೆ : ಇಂಟರ್ನ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಅರ್ಹತೆ : ಸ್ನಾತಕೋತ್ತರ/ಸ್ನಾತಕ ಪದವಿ( ಸಮಾಜ ವಿಜ್ಞಾನ/ ಸಿವಿಲ್ ಇಂಜಿನಿಯರಿಂಗ್) ಪಡೆದಿರಬೇಕು.

    ಹುದ್ದೆ ಸಂಖ್ಯೆ : ಒಟ್ಟು ಹುದ್ದೆ 05

    ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ಗೌರವಧನ ರೀತಿಯಲ್ಲಿ ರೂ. 15,000/- + 2,000/- ನೀಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-04-2021

    ಇಂಟರ್ನ್‌ ಅವಧಿಯು 3 ತಿಂಗಳಾಗಿದ್ದು, ಅಗತ್ಯವಿದ್ದಲ್ಲಿ ವಿಸ್ತರಣೆ ಮಾಡಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಪ್ರಯಾಣ ಮಾಡಲು ನಿಯೋಜಿಸುವ ಜಿಲ್ಲೆ ಹಾಗೂ ವಾಸ ಮಾಡಲು ಸಿದ್ಧರಿರಬೇಕು. ಇಂಟರ್ನ್‌ಶಿಪ್ ಕಾರ್ಯಕ್ರಮಗಳ ಅನುಭವ ಮತ್ತು ಕನ್ನಡ ಭಾಷೆಯ ಜ್ಞಾನ ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.

    ಆಸಕ್ತ ಅಭ್ಯರ್ಥಿಗಳು ದಿನಾಂಕ 10-04-2021 ರೊಳಗಾಗಿ ತಮ್ಮ ಸ್ವವಿವರ ಅರ್ಜಿಯನ್ನು ಇ-ಮೇಲ್ ವಿಳಾಸಕ್ಕೆ ಸಲ್ಲಿಸತಕ್ಕದ್ದು. ಯಾವುದೇ ಹಾರ್ಡ್‌ ಪ್ರತಿಯನ್ನು ಸ್ವೀಕರಿಸುವುದಿಲ್ಲ.

    ಹೆಚ್ವಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ( ಆಡಳಿತ), ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ರವನ್ನು ಸಂಪರ್ಕಿಸಬಹುದು.
    ದೂರವಾಣಿ ಸಂಖ್ಯೆ : 080-22342163

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ